ADVERTISEMENT

ತೆಲುಗು ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2021, 6:09 IST
Last Updated 3 ನವೆಂಬರ್ 2021, 6:09 IST
ಬಾಲಕೃಷ್ಣ
ಬಾಲಕೃಷ್ಣ    

ತೆಲುಗಿನ ಸೂಪರ್‌ ಸ್ಟಾರ್ ನಟನಂದಮೂರಿ ಬಾಲಕೃಷ್ಣ ಅವರು ಇಲ್ಲಿನ ಕೇರ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಾಲಕೃಷ್ಣ ಅವರು ಭುಜದ ನೋವಿನಿಂದ ಬಳಲುತ್ತಿದ್ದು ಶಸ್ತ್ರಚಿಕಿತ್ಸೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಬಲ ಭುಜದ ಮಾಂಸಖಂಡಗಳಲ್ಲಿ ಸಮಸ್ಯೆ ಇರುವುದರಿಂದ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಬಾಲಕೃಷ್ಣ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಗುರುವಾರ ಅಥವಾ ಶುಕ್ರವಾರ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ADVERTISEMENT

ಕೆಲವು ವರ್ಷಗಳ ಹಿಂದೆ ಚಿತ್ರೀಕರಣ ಸಮಯದಲ್ಲಿ ಅವರ ಭುಜಕ್ಕೆ ಪೆಟ್ಟಾಗಿತ್ತು. 6 ತಿಂಗಳಿಂದ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರಿಗೆ ಬೇರೆ ಯಾವುದೇ ರೀತಿಯ ಸಮಸ್ಯೆಗಳು ಇಲ್ಲ ಎಂದು ಅವರ ಮ್ಯಾನೇಜರ್‌ ಖಚಿತಪಡಿಸಿದ್ದಾರೆ.

ಬಾಲಕೃಷ್ಣ ಅಕ್ಟೋಬರ್ 30 ರಂದು ಬೆಂಗಳೂರಿಗೆ ಬಂದು ಪುನೀತ್ ರಾಜ್‌ಕುಮಾರ್ ಅಂತಿಮ ದರ್ಶನದಲ್ಲಿ ಪಾಲ್ಗೊಂಡಿದ್ದರು. ನಂತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು.

ಸದ್ಯ ಬಾಲಕೃಷ್ಣ ಅಭಿನಯದ ಅಖಂಡ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ.ಖ್ಯಾತ ನಿರ್ದೇಶಕ ಬಾಯಿಪಾಟು ಸೀನು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ರವೀಂದ್ರ ರೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ.ಪ್ರಜ್ಞ್ಯಾ ಜೈಸ್ವಾಲ್ ನಾಯಕಿಯಾದರೆ, ಶ್ರೀಕಾಂತ್‌ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.