ADVERTISEMENT

ಜೀವಮಾನದ ಸಾಧನೆಗಾಗಿ ನಟ ರಜನಿಕಾಂತ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2021, 10:37 IST
Last Updated 25 ಅಕ್ಟೋಬರ್ 2021, 10:37 IST
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಪ್ರಶಸ್ತಿ ಸ್ವೀಕರಿಸಿದ ರಜನಿಕಾಂತ್ (ಚಿತ್ರ ಕೃಪೆ: ಮಾಹಿತಿ ಮತ್ತು ಪ್ರಸಾರ ಸಚಿವಾಲಯ)
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಪ್ರಶಸ್ತಿ ಸ್ವೀಕರಿಸಿದ ರಜನಿಕಾಂತ್ (ಚಿತ್ರ ಕೃಪೆ: ಮಾಹಿತಿ ಮತ್ತು ಪ್ರಸಾರ ಸಚಿವಾಲಯ)   

ನವದೆಹಲಿ: ರಾಷ್ಟ್ರ‌ ರಾಜಧಾನಿಯಲ್ಲಿರುವ ವಿಜ್ಞಾನ ಭವನದಲ್ಲಿ ಸೋಮವಾರ67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಶಸ್ತಿ ಪ್ರದಾನ ಮಾಡಿದರು.‌

ಖ್ಯಾತ ನಟ ರಜನಿಕಾಂತ್‌ ಅವರಿಗೆ 51ನೇ ʼದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿʼ ನೀಡಿ ಗೌರವಿಸಲಾಯಿತು.

ಭಾರತೀಯ ಸಿನಿಮಾದ ಪಿತಾಮಹ ದಾದಾಸಾಹೇಬ್‌ ಫಾಲ್ಕೆ ಅವರ ಹೆಸರಿನಲ್ಲಿ ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ.ರಜನಿಕಾಂತ್‌ ಅವರ ಜೀವಮಾನದಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ.

ADVERTISEMENT
ಪ್ರಶಸ್ತಿಯೊಂದಿಗೆ ರಜನಿಕಾಂತ್ (ಚಿತ್ರ ಕೃಪೆ: ಮಾಹಿತಿ ಮತ್ತು ಪ್ರಸಾರ ಸಚಿವಾಲಯ)

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಜನಿಕಾಂತ್, ‘ಪ್ರತಿಷ್ಠಿತ ಪ್ರಶಸ್ತಿಗಾಗಿ ಸರ್ಕಾರಕ್ಕೆ ನನ್ನ ಧನ್ಯವಾದಗಳು. ನನ್ನ ಗುರು, ಹಾಗೂ ಚಿತ್ರ ನಿರ್ದೇಶಕ ಕೆ.ಬಾಲಚಂದರ್ ಅವರಿಗೆ ಪ್ರಶಸ್ತಿಯನ್ನು ಅರ್ಪಿಸುತ್ತೇನೆ. ನನ್ನ ಸಹೋದರ ಸತ್ಯನಾರಾಯಣ ರಾವ್ ಅವರಿಗೆ ಧನ್ಯವಾದಗಳು’ಎಂದು ಹೇಳಿದರು.

‘ನನ್ನ ಸ್ನೇಹಿತ, ಚಾಲಕ ಮತ್ತು ಸಾರಿಗೆ ಸಹೋದ್ಯೋಗಿ ರಾಜ್ ಬಹದ್ದೂರ್ ಅವರು ನನ್ನಲ್ಲಿ ನಟನೆಯ ಪ್ರತಿಭೆಯನ್ನು ಗುರುತಿಸಿದರು ಮತ್ತು ನನ್ನನ್ನು ಚಿತ್ರರಂಗಕ್ಕೆ ಸೇರುವಂತೆ ಪ್ರೋತ್ಸಾಹಿಸಿದರು. ನನ್ನ ಸಿನಿಮಾಗಳನ್ನು ನಿರ್ಮಿಸಿದ ನಿರ್ದೇಶಕರು, ನಿರ್ಮಾಪಕರು, ತಂತ್ರಜ್ಞರು, ಕಲಾವಿದರು, ವಿತರಕರು, ಮಾಧ್ಯಮದವರು, ನನ್ನ ಎಲ್ಲಾ ಅಭಿಮಾನಿಗಳು, ಮತ್ತು ತಮಿಳು ಜನರಿಗೆ ಧನ್ಯವಾದಗಳು’ ಎಂದರು.

2019ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನುಮಾರ್ಚ್‌ನಲ್ಲೇಘೋಷಿಸಲಾಗಿತ್ತು. ಆದರೆ, ಕೋವಿಡ್‌ ಕಾರಣದಿಂದಾಗಿಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿತ್ತು.

ತಮಿಳು ನಟ ಧನುಷ್‌ ಮತ್ತು ಹಿಂದಿಯ ಮನೋಜ್‌ ಬಾಜಪೇಯಿ ಅವರು ಕ್ರಮವಾಗಿʼಅಸುರನ್‌ʼ ಹಾಗೂ ʼಭೋನ್ಸ್ಲೇʼ ಸಿನಿಮಾದಲ್ಲಿನ ನಟನೆಗಾಗಿ ʼಅತ್ಯುತ್ತಮ ನಟʼ ಪ್ರಶಸ್ತಿ ಪಡೆದಿದ್ದಾರೆ.ಹಾಗೆಯೇ ಬಾಲಿವುಡ್ ನಟಿ ಕಂಗನಾ ರನೌತ್‌ ʼಮಣಿಕರ್ಣಿಕಾʼ, ʼಪಂಗಾʼ ಚಿತ್ರಗಳಲ್ಲಿನ ಅಭಿನಯಕ್ಕಾಗಿ ʼಅತ್ಯುತ್ತಮ ನಟಿʼ ಪ್ರಶಸ್ತಿ ಸ್ವೀಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.