ADVERTISEMENT

ನಿರ್ಭಯಾ ಅಪರಾಧಿಗಳನ್ನು ಗಲ್ಲಿಗೇರಿಸುವ ಜಲ್ಲಾದ್‌ಗೆ ಜಗ್ಗೇಶರಿಂದ ₹1 ಲಕ್ಷ ದೇಣಿಗೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2020, 13:00 IST
Last Updated 9 ಜನವರಿ 2020, 13:00 IST
   

ಬೆಂಗಳೂರು:ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಲಿರುವಪವನ್ ಜಲ್ಲಾದ್ ಅವರಿಗೆ ₹ 1 ಲಕ್ಷ ದೇಣಿಗೆ ನೀಡುವುದಾಗಿ ನಟ ಜಗ್ಗೇಶ್‌ ಹೇಳಿದ್ದಾರೆ.

ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳನ್ನು ಇದೇ 22ರಂದು ಗಲ್ಲಿಗೇರಿಸುವಂತೆ ಕೋರ್ಟ್ ಆದೇಶಿಸಿದ್ದು ಉತ್ತರ ಪ್ರದೇಶ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಉತ್ತರ ಪ್ರದೇಶಪೊಲೀಸ್ ಇಲಾಖೆಯು ಅಪರಾಧಿಗಳನ್ನು ಗಲ್ಲಿಗೇರಿಸುವ ಹೊಣೆಯನ್ನು 57 ವರ್ಷದಪವನ್ ಜಲ್ಲಾದ್​ಗೆ ವಹಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪವನ್‌ಜಲ್ಲಾದ್​,ನಾನು ಅಪರಾಧಿಗಳನ್ನು ಗಲ್ಲಿಗೇರಿಸಲು ಸಿದ್ಧವಾಗಿದ್ದೇನೆ. ಇದು ನನ್ನ ಮಗಳ ಮದುವೆಗೆ ಹಣ ಹೊಂದಿಸುವುದಕ್ಕಾಗಿ ದೇವರು ಕೊಟ್ಟ ಅವಕಾಶ ಎಂದು ಭಾವಿಸುತ್ತೇನೆ ಎಂದು ಹೇಳಿದ್ದರು.

ADVERTISEMENT

ಪವನ್‌ ಜಲ್ಲಾದ್​ ಅವರ ಭಾವುಕ ಪ್ರತಿಕ್ರಿಯೆಗೆ ಟ್ವೀಟ್ ಮಾಡಿರುವ ನಟ ಜಗ್ಗೇಶ್‌ ನೀವು ಅಪರಾಧಿಗಳನ್ನು ಗಲ್ಲಿಗೇರಿಸಿದರೆ ₹1 ಲಕ್ಷ ದೇಣಿಗೆ ನೀಡುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.