ಹೈದರಾಬಾದ್: ರಕ್ತದೊತ್ತಡದಲ್ಲಿ ವ್ಯತ್ಯಾಸವಾದ ಕಾರಣಸೂಪರ್ಸ್ಟಾರ್ ರಜನಿಕಾಂತ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯಕೀಯ ವರದಿಗಳ ಪ್ರಕಾರ ಅವರ ಆರೋಗ್ಯದ ವಿಷಯದಲ್ಲಿ ಆತಂಕಪಡುವಂಥದ್ದು ಏನೂ ಇಲ್ಲ ಎಂದು ಅವರನ್ನು ಪರೀಕ್ಷಿಸಿದ ವೈದ್ಯರ ತಂಡ ಸ್ಪಷ್ಟಪಡಿಸಿದೆ.
ತೀವ್ರ ರಕ್ತದೊತ್ತಡದ ಏರಿಳಿತದ ಸಮಸ್ಯೆಯಿಂದಾಗಿ ರಜನಿಕಾಂತ್ ಅವರು ಇಲ್ಲಿನ ಅಪಲೊ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ‘ಮಧ್ಯಾಹ್ನದ ನಂತರ ರಜನಿಕಾಂತ್ ಅವರನ್ನು ವೈದ್ಯರ ತಂಡ ತಪಾಸಣೆ ನಡೆಸಲಿದೆ. ವೈದ್ಯಕೀಯ ವರದಿ ಆಧರಿಸಿ, ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗುತ್ತದೆ‘ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ:ಸೂಪರ್ಸ್ಟಾರ್ ರಜನಿಕಾಂತ್ ಆರೋಗ್ಯ ಸುಧಾರಣೆ
ಸನ್ ಪಿಕ್ಚರ್ಸ್ ನಿರ್ಮಾಣದ 'ಅಣ್ಣಾತೆ' ಎಂಬ ತಮಿಳು ಚಿತ್ರದ ಚಿತ್ರೀಕರಣಕ್ಕಾಗಿ ಅವರು ಡಿಸೆಂಬರ್ 13 ರಿಂದ ಹೈದರಾಬಾದ್ನಲ್ಲಿ ಬೀಡುಬಿಟ್ಟಿದ್ದಾರೆ. ಚಿತ್ರೀಕರಣ ತಂಡದಲ್ಲಿ ನಾಲ್ವರು ಸಿಬ್ಬಂದಿಗೆ ಕೋವಿಡ್ 19 ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ರಜನಿಕಾಂತ್ ಅವರು ಪರೀಕ್ಷೆಗೆ ಒಳಗಾಗಿದ್ದರು. ವರದಿ ನೆಗೆಟಿವ್ ಬಂದಿದ್ದರೂ ಅವರು ಪ್ರತ್ಯೇಕ ವಾಸದಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.