ಹೈದರಾಬಾದ್:ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗಿನ ಖ್ಯಾತ ನಟ, ದಿವಂಗತ ಎನ್.ಟಿ. ರಾಮರಾವ್ ಅವರ ನಾಲ್ಕನೇ ಮಗಳು ಉಮಾ ಮಹೇಶ್ವರಿ ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಹೈದರಾಬಾದ್ನ ಜುಬಿಲಿ ಹಿಲ್ಸ್ನ ಅವರ ನಿವಾಸದಲ್ಲಿ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಉಮಾ ಅವರ ಶವವನ್ನು ಜುಬಿಲಿ ಹಿಲ್ಸ್ ಪೊಲೀಸರು ಸ್ಥಳಾಂತರಿಸಿದ್ದಾರೆ.
ಉಮಾ ಮಹೇಶ್ವರಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಅನಾರೋಗ್ಯದಿಂದ ಖಿನ್ನತೆಗೆ ಒಳಗಾಗಿ ಜೀವ ಕಳೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಎನ್ಟಿಆರ್ ಅವರ ಕಿರಿಯ ಮಗಳಾದ ಉಮಾ ಮಹೇಶ್ವರಿ, ಇತ್ತೀಚೆಗೆ ತಮ್ಮ ಮಗಳ ಮದುವೆ ನೆರವೇರಿಸಿದ್ದರು.
ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು, ಅವರ ಮಗ ಲೋಕೇಶ್, ನಟ ನಂದಮೂರಿ ಬಾಲಕೃಷ್ಣ ಹಾಗೂ ಕುಟುಂಬದ ಇತರ ಸದಸ್ಯರು ವಿಷಯ ತಿಳಿದೊಡನೆಯೇ ಮಹೇಶ್ವರಿ ಅವರ ಮನೆಗೆ ಭೇಟಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.