ADVERTISEMENT

‘ಬೆಟ್ಟದ ಹೂವು’ ಅಭಿನಯ ನನ್ನ ಮನಸ್ಸಿನಲ್ಲಿ ಆಳವಾಗಿ ಅಚ್ಚೊತ್ತಿದೆ: ಪವನ್ ಕಲ್ಯಾಣ್

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2021, 14:22 IST
Last Updated 29 ಅಕ್ಟೋಬರ್ 2021, 14:22 IST
   

ಬೆಂಗಳೂರು: ದೊಡ್ಮನೆ ಕುಡಿ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ. ದಿಗ್ಭ್ರಮೆ ವ್ಯಕ್ತಪಡಿಸಿರುವ ನಟ, ನಟಿಯರು #Heartbroking ಹ್ಯಾಶ್ ಟ್ಯಾಗ್ ಮೂಲಕ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ಟಾಲಿವುಡ್ ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಸಹ ಪುನೀತ್ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಶ್ರೀ ಪುನೀತ್ ರಾಜ್‌ಕುಮಾರ್ ಅವರ ಹಠಾತ್ ಮತ್ತು ದುರದೃಷ್ಟಕರ ನಿಧನದಿಂದ ನನಗೆ ತುಂಬಾ ದುಃಖವಾಗಿದೆ. ಅವರ ಮೊದಲ ಚಿತ್ರ ‘ಬೆಟ್ಟದ ಹೂವು’ ಚಿತ್ರದಲ್ಲಿ ಬಾಲನಟನಾಗಿ ಅವರ ಅಭಿನಯ ನನ್ನ ಮನಸ್ಸಿನಲ್ಲಿ ಆಳವಾಗಿ ಅಚ್ಚೊತ್ತಿದೆ. ಅಂದಿನಿಂದಲೇ ಅವರನ್ನು ಮೆಚ್ಚಿಕೊಂಡೆ ಎಂದು ಪವನ್ ಕಲ್ಯಾಣ್ ಟ್ವೀಟ್ ಮಾಡಿದ್ದಾರೆ.

ADVERTISEMENT

ಭಾರವಾದ ಹೃದಯದಿಂದ 'ನನ್ನ ಪ್ರೀತಿಯ ಸಹೋದರ 'ಪುನೀತ್' ನಿಮ್ಮ ಅಂತಿಮ ಯಾತ್ರೆಯಲ್ಲಿ ನಿಮ್ಮನ್ನು ನೋಡಿಕೊಳ್ಳಲು ಎಂದು ನಾನು ಸರ್ವಶಕ್ತನನ್ನು ಪ್ರಾರ್ಥಿಸುತ್ತೇನೆ. ಶ್ರೀ ಶಿವ ರಾಜ್ ಕುಮಾರ್ ಮತ್ತು ಶ್ರೀ ಪುನೀತ್ ಅವರ ಕುಟುಂಬ ಸದಸ್ಯರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಪವನ್ ಕಲ್ಯಾಣ್ ಟ್ವೀಟ್ ಮಾಡಿದ್ದಾರೆ.

ನಾನು ಭೇಟಿಯಾದ ಅತ್ಯಂತ ಕರುಣಾಮಯಿ ಮತ್ತು ಸರಳ ವ್ಯಕ್ತಿ ನೀನು. ಜಗತ್ತು ಮತ್ತೊಂದು ರತ್ನವನ್ನು ಕಳೆದುಕೊಂಡಿದೆ. ನಿಮ್ಮ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಓಂ ಶಾಂತಿ ಎಂದು ಬಾಲಿವುಡ್ ನಟ ಸಂಜಯ್ ದತ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.