ADVERTISEMENT

ರಾಮಮಂದಿರ ನಿರ್ಮಾಣಕ್ಕೆ ₹ 30 ಲಕ್ಷ ದೇಣಿಗೆ ನೀಡಿದ ಟಾಲಿವುಡ್ ನಟ ಪವನ್ ಕಲ್ಯಾಣ್

​ಪ್ರಜಾವಾಣಿ ವಾರ್ತೆ
Published 24 ಜನವರಿ 2021, 10:24 IST
Last Updated 24 ಜನವರಿ 2021, 10:24 IST
ಪವನ್ ಕಲ್ಯಾಣ್‌
ಪವನ್ ಕಲ್ಯಾಣ್‌   

ಟಾಲಿವುಡ್‌ನ ಖ್ಯಾತ ನಟ, ರಾಜಕಾರಣಿ ಪವನ್ ಕಲ್ಯಾಣ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ₹30 ಲಕ್ಷ ದೇಣಿಗೆ ನೀಡಿದ್ದಾರೆ.

ಜನಸೇನಾ ಪಕ್ಷದ ಅಧ್ಯಕ್ಷರಾಗಿರುವ ಪವನ್‌ ‘ಭಗವಾನ್ ಶ್ರೀರಾಮ ಧರ್ಮ ಹಾಗೂ ತಾಳ್ಮೆಯ ಪ್ರತೀಕ. ರಾಮ ಮಾಡಿದ ತ್ಯಾಗ ಹಾಗೂ ತೋರಿದ ಧೈರ್ಯ ನಮಗೆಲ್ಲರಿಗೂ ಸ್ಫೂರ್ತಿ. ಭಾರತದಲ್ಲಿ ಎಲ್ಲರೂ ರಾಮನ ಹಾದಿಯಲ್ಲಿ ನಡೆಯುತ್ತಿದ್ದಾರೆ. ಆ ಕಾರಣಕ್ಕೆ ಅಂತಹ ಧರ್ಮದ ಪ್ರತಿರೂಪವಾದ ಅಯೋಧ್ಯೆಯಲ್ಲಿ ದೇವಾಲಯ ನಿರ್ಮಾಣಕ್ಕೆ ಎಲ್ಲರೂ ಒಗ್ಗಟ್ಟಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ರಾಮಮಂದಿರ ನಿರ್ಮಾಣಕ್ಕೆ ನನ್ನ ಕಡೆಯಿಂದ ₹ 30 ಲಕ್ಷ ದೇಣಿಗೆ ನೀಡುತ್ತಿದ್ದೇನೆ’ ಎಂದಿದ್ದಾರೆ.

‘ನಾನು ದೇಣಿಗೆ ನೀಡಿದ್ದನ್ನು ಕೇಳಿ ನನ್ನ ನನ್ನೊಂದಿಗೆ ಕೆಲಸ ಮಾಡುವವರೆಲ್ಲರೂ ಒಂದಾಗಿ ₹ 11,000 ದೇಣಿಗೆ ಸಂಗ್ರಹಿಸಿದ್ದಾರೆ. ಅವರಲ್ಲಿ ಬರೀ ಹಿಂದೂಗಳಲ್ಲ, ಮುಸ್ಲಿಮರು ಹಾಗೂ ಕ್ರಿಶ್ಚಿಯನ್ನರು ಇದ್ದಾರೆ’ ಎಂದಿದ್ದಾರೆ.

ADVERTISEMENT

ಸಿನಿಮಾಕ್ಕೆ ಸಂಬಂಧಿಸಿದಂತೆ ಪವನ್ ನಟನೆ, ಶ್ರೀರಾಮ್ ವೇಣು ನಿರ್ದೇಶನದ ‘ವಕೀಲ್ ಸಾಬ್’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಇದು ಬಾಲಿವುಡ್‌ನ ಪಿಂಕ್ ಸಿನಿಮಾದ ರಿಮೇಕ್ ಆಗಿದೆ. ಇದರಲ್ಲಿ ಪವನ್ ವಕೀಲನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.