ADVERTISEMENT

ಪ್ರಭಾಸ್ ನಟನೆಯ ‘ಆದಿಪುರುಷ್’ ಬಿಡುಗಡೆಗೆ ತಡೆ ಕೋರಿ ಅರ್ಜಿ

ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ

ಪಿಟಿಐ
Published 8 ಅಕ್ಟೋಬರ್ 2022, 13:50 IST
Last Updated 8 ಅಕ್ಟೋಬರ್ 2022, 13:50 IST
ಆದಿಪುರುಷ್ ಸಿನಿಮಾ ಪೋಸ್ಟರ್‌
ಆದಿಪುರುಷ್ ಸಿನಿಮಾ ಪೋಸ್ಟರ್‌   

ನವದೆಹಲಿ: ಪ್ರಭಾಸ್ ನಟನೆಯ ‘ಆದಿಪುರುಷ್’ ಸಿನಿಮಾದಲ್ಲಿ ಹಿಂದೂ ದೇವರನ್ನು ತಪ್ಪಾಗಿ ಬಿಂಬಿಸಲಾಗಿದೆ. ಹೀಗಾಗಿ ಈ ಸಿನಿಮಾ ಬಿಡುಗಡೆಗೆ ತಡೆ ನೀಡಬೇಕೆಂದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.

ವಕೀಲ ರಾಜ್ ಗೌರವ್ ಅವರು ಸಿನಿಮಾ ಬಿಡುಗಡೆಗೆ ಶಾಶ್ವತ ತಡೆಯಾಜ್ಞೆ ಕೋರಿ ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ.

ಚಿತ್ರದ ನಿರ್ಮಾಪಕ ಭೂಷಣ್ ಕುಮಾರ್ ಮತ್ತು ನಿರ್ದೇಶಕ ಮತ್ತು ಸಹ-ನಿರ್ಮಾಪಕ ಓಂ ರಾವುತ್ ಅವರು ರಾಮಾಯಣದ ಮೂಲ ಅಂಶಗಳನ್ನು ದುರ್ಬಳಕೆ ಮಾಡಿದ್ದಾರೆ. ಸಿನಿಮಾದಲ್ಲಿ ಹಿಂದೂಗಳ ಧಾರ್ಮಿಕ, ಸಾಂಸ್ಕೃತಿಕ, ಐತಿಹಾಸಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ. ಟೀಸರ್‌ನಲ್ಲಿ ರಾಮ ಮತ್ತು ಹನುಮನನ್ನು ತಪ್ಪಾಗಿ ಬಿಂಬಿಸಲಾಗಿದೆ. ಮೂಲತಃ ರಾಮ ಪ್ರಶಾಂತ ಸ್ವಭಾವದ ವ್ಯಕ್ತಿ, ಆದರೆ ಸಿನಿಮಾದಲ್ಲಿ ಕ್ರೂರ ಎಂಬಂತೆ ಬಿಂಬಿಸಲಾಗಿದೆ ಎಂದು ಆರೋಪಿಸಿದ್ದಾರೆ.

ADVERTISEMENT

ಸೋಮವಾರ ಈ ಅರ್ಜಿಯ ವಿಚಾರಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.