ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅವರು ಚಿಕಿತ್ಸೆಗಾಗಿ ದಾಖಲಾಗಿರುವ ವಿಕ್ರಮ್ ಆಸ್ಪತ್ರೆ ಸುತ್ತಲೂ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು, ಆಸ್ಪತ್ರೆಯೊಳಗೆ ಜನರ ಓಡಾಟವನ್ನು ನಿಷೇಧಿಸಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಸಂಬಂಧಿಕರನ್ನು ದಾಖಲೆ ಪರಿಶೀಲನೆ ನಡೆಸಿ ಒಳಗೆ ಬಿಡುತ್ತಿದ್ದಾರೆ.
ವಿಕ್ರಮ್ ಆಸ್ಪತ್ರೆಯ ಎರಡೂ ಗೇಟ್ಗಳಲ್ಲಿ ಬಿಗಿ ಭದ್ರತೆ ಇದೆ.
ಪುನೀತ್ ರಾಜ್ಕುಮಾರ್ ಸಂಬಂಧಿಕರು, ಪರಿಚಯಸ್ಥರು, ಚಿತ್ರರಂಗದ ಪ್ರಮುಖರನ್ನು ಮಾತ್ರ ಒಳಗೆ ಬಿಡಲಾಗುತ್ತಿದೆ.
ಕೆಎಸ್ಆರ್ಪಿ ಸಿಬ್ಬಂದಿ ಸಹ ಸ್ಥಳದಲ್ಲಿ ಜಮಾಯಿಸಿದ್ದಾರೆ. ಜನರನ್ನು ನಿಯಂತ್ರಿಸಲು ಸಿದ್ಧರಾಗಿದ್ದಾರೆ.
ಇವುಗಳನ್ನೂ ಓದಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.