ADVERTISEMENT

ಕಾಂತಾರ ವಿಚಾರವಾಗಿ ನಟ ಚೇತನ್‌ ವಿರುದ್ಧ ಪ್ರಮೋದ್ ಮುತಾಲಿಕ್ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2022, 14:33 IST
Last Updated 20 ಅಕ್ಟೋಬರ್ 2022, 14:33 IST
ಕಾಂತಾರ
ಕಾಂತಾರ    

ಹಾವೇರಿ: ಕಾಂತಾರ ಚಿತ್ರದ ಕುರಿತು ನಟ ಚೇತನ್ ಹೇಳಿಕೆಗೆ ಹಾವೇರಿಯಲ್ಲಿ ಗುರುವಾರಪ್ರತಿಕ್ರಿಯಿಸಿರುವ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್,‘ಕಾಂತಾರ ಚಿತ್ರ ಇಡೀ ಕರ್ನಾಟಕ ಮಾತ್ರವಲ್ಲ, ದೇಶದಲ್ಲಿ ಕನ್ನಡದ ಡಿಂಡಿಮ ಬಾರಿಸುತ್ತಿದೆ. ಅಂಥದ್ದರಲ್ಲಿ ಒಬ್ಬ ದುಷ್ಟ, ನೀಚ, ನಾಸ್ತಿಕವಾದಿ ನಟ ಚೇತನ್ ಕಲ್ಲು ಹಾಕುವ ಪ್ರಯತ್ನ ಮಾಡಿದ್ದು ಖಂಡನೀಯ, ಸಂಸ್ಕೃತಿ ವಿರೋಧಿ. ನಮ್ಮ ಹಿಂದೂ ಸಮಾಜ ಒಡೆಯುವ ಪ್ರಕ್ರಿಯೆ ಮಾಡ್ತಿರುವುದು ಸರಿಯಲ್ಲ’ ಎಂದು ಖಾರವಾಗಿ ನುಡಿದರು.

‘ಚೇತನ್ ಅವರೇ ನಿಮ್ಮ ಒಡಕು ಬಾಯಿ, ಹಿಂದೂ ವಿರೋಧಿ ಬಾಯಿ, ದೇಶದ್ರೋಹಿ ಬಾಯಿಯನ್ನು ಸ್ವಲ್ಪ ಮುಚ್ಚಬೇಕು. ನೀವು ಒಳ್ಳೆಯ ನಟರಾಗಿರಬೇಕೇ ವಿನಾ ಹಿಂದೂ ವಿರೋಧಿ, ದೇಶದ್ರೋಹಿ ಅಥವಾ ಸಮಾಜ ಕಂಟಕದ ಕೆಲಸವನ್ನು ನಿಮ್ಮಿಂದ ಆಪೇಕ್ಷಿಸಿರಲಿಲ್ಲ. ನಿಮ್ಮ ಹೇಳಿಕೆಯನ್ನು ವಾಪಸ್ ತೆಗೆದುಕೊಳ್ಳಿ. ಆದಿವಾಸಿ, ಬುಡಕಟ್ಟು ಜನಾಂಗ ಅಂತಾ ಹಿಂದೂ ಸಮಾಜವನ್ನು ಒಡೆಯುವ ಪ್ರಯತ್ನ ಮಾಡಬೇಡಿ’ ಎಂದು ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT