ADVERTISEMENT

ನಟ, ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್‌ಗೆ ಕೋವಿಡ್-19 ದೃಢ

ಏಜೆನ್ಸೀಸ್
Published 20 ಅಕ್ಟೋಬರ್ 2020, 10:32 IST
Last Updated 20 ಅಕ್ಟೋಬರ್ 2020, 10:32 IST
ನಟ, ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್
ನಟ, ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್   

ನವದೆಹಲಿ: ದಕ್ಷಿಣ ಭಾರತದ ನಟ ಪೃಥ್ವಿರಾಜ್ ಸುಕುಮಾರನ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅವರೇ ಬಹಿರಂಗಪಡಿಸಿದ್ದಾರೆ.

ಡಿಜೋ ಜೋಸ್ ಆಂಥೋನಿ ಅವರ ಮಲಯಾಳಂ ಚಿತ್ರ 'ಜನ ಗಣ ಮನ' ಚಿತ್ರದ ಸೆಟ್‌ಗಳಲ್ಲಿ ಸುಮಾರು ಎರಡು ವಾರಗಳ ಕಾಲ ಚಿತ್ರೀಕರಣ ನಡೆಸಿದ ನಂತರ ನಡೆಸಿದ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಪೃಥ್ವಿರಾಜ್ ಅವರು ಸೆಟ್‌ಗೆ ಹೋಗುವ ಮುನ್ನ ಕಡ್ಡಾಯವಾಗಿ ಕೊರೊನಾ ವೈರಸ್ಸೋಂಕು ಪರೀಕ್ಷೆಗೆ ಒಳಗಾಗಬೇಕಿತ್ತು. ಆಗ ವರದಿಯಲ್ಲಿ ನೆಗೆಟಿವ್ ಬಂದಿತ್ತು. ಆದರೆ ಚಿತ್ರೀಕರಣದ ಕೊನೆಯ ದಿನ ನಡೆಸಿದ ಮತ್ತೊಂದು ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ಕಂಡುಬಂದಿರುವುದಾಗಿ ತಿಳಿಸಿದ್ದಾರೆ.

ADVERTISEMENT

ಎಲ್ಲರಿಗೂ ನಮಸ್ಕಾರ, ನಾನು ಅಕ್ಟೋಬರ್ 7 ರಿಂದ ಜನ ಗಣ ಮನ ಚಿತ್ರದ ಚಿತ್ರೀಕರಣದಲ್ಲಿದ್ದೇನೆ. ಕೋವಿಡ್ ನಿಯಮಗಳು ಮತ್ತು ಸಂಬಂಧಿತ ಸುರಕ್ಷತಾ ಕ್ರಮಗಳಿಗೆ ಸಂಬಂಧಿಸಿದಂತೆ ನಾವು ಕಟ್ಟುನಿಟ್ಟಾದ ಕ್ರಮಗಳನ್ನು ನಾವು ಪಾಲಿಸಿದ್ದೇವೆ. ಚಿತ್ರೀಕರಣದಲ್ಲಿ ಭಾಗಿಯಾಗುವ ಮುನ್ನ ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲಾಯಿತು. ನಾವು ಹಾಕಿದ್ದ ನ್ಯಾಯಾಲಯದ ಕೋಣೆಯ ಸೆಟ್‌ನಲ್ಲಿ ನಡೆದ ಚಿತ್ರೀಕರಣದ ಕೊನೆಯ ದಿನವೂ ಪರೀಕ್ಷೆಗಳನ್ನು ನಡೆಸಲಾಯಿತು. ಆದರೆ ದುರದೃಷ್ಟವಶಾತ್, ಈ ಬಾರಿ ವರದಿಯು ಪಾಸಿಟಿವ್ ಆಗಿದೆ ಮತ್ತು ನಾನು ಐಸೋಲೇಷನ್‌ಗೆ ತೆರಳಿದ್ದೇನೆ ಎಂದು ಪೃಥ್ವಿರಾಜ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸೋಂಕಿನ ಯಾವುದೇ ಲಕ್ಷಣಗಳು ನನಗಿಲ್ಲ ಮತ್ತು ಈಗ ಉತ್ತಮವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರನ್ನು ಪ್ರತ್ಯೇಕ ಮತ್ತು ಪರೀಕ್ಷೆ ಮಾಡಿಸಿಕೊಳ್ಳಲು ಸೂಚಿಸಲಾಗಿದೆ. ಶೀಘ್ರದಲ್ಲೇ ಚೇತರಿಕೊಳ್ಳುತ್ತೇನೆ ಮತ್ತು ಆದಷ್ಟು ಬೇಗ ಕೆಲಸಕ್ಕೆ ಮರಳುತ್ತೇನೆ. ನಿಮ್ಮ ಪ್ರೀತಿ ಮತ್ತು ಕಾಳಜಿಗೆ ಧನ್ಯವಾದಗಳು ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.