ADVERTISEMENT

ಶ್ರೇಯಸ್‌ ಹೊಸ ಚಿತ್ರಕ್ಕೆ ಪ್ರಿಯಾಂಕಾ...

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2023, 4:50 IST
Last Updated 30 ಮಾರ್ಚ್ 2023, 4:50 IST
ಪ್ರಿಯಾಂಕಾ
ಪ್ರಿಯಾಂಕಾ   

ನಿರ್ಮಾಪಕ ಕೆ. ಮಂಜು ಅವರ ಪುತ್ರ ಶ್ರೇಯಸ್ ಕೆ. ಮಂಜು ಹೊಸ ಸಿನಿಮಾ ಘೋಷಿಸಿದ್ದಾರೆ. ಕಾಲೇಜಿನ ಪ್ರೀತಿಯ ಸುತ್ತ ಸುತ್ತುವ ಈ ಚಿತ್ರಕ್ಕೆ ಪ್ರಿಯಾಂಕಾ ಕುಮಾರ್ ನಾಯಕಿಯಾಗಿ ಆಯ್ಕೆಗೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ಬ್ಯಾಡ್ ಮ್ಯಾನರ್ಸ್ ಹಾಗೂ ಎ.ಪಿ. ಅರ್ಜುನ್ ಹಾಗೂ ವಿರಾಟ್ ಕಾಂಬೋದ ಅದ್ದೂರಿ ಲವರ್ ಸಿನಿಮಾದಲ್ಲಿ ನಾಯಕಿಯಾಗಿ ಬಣ್ಣ ಹಚ್ಚಿರುವ ಪ್ರಿಯಾಂಕಾ ಅವರಿಗೆ ಇದು ಮೂರನೇ ಚಿತ್ರವಿದು.

ಕೆಲವು ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಮಧು ಗೌಡ ಗಂಗೂರು ಈ ಚಿತ್ರದ ನಿರ್ದೇಶಕರು. ಆರ್. ಸಂತೋಷ್ ಕುಮಾರ್‌ ನಿರ್ಮಾಪಕರು. ಅರ್ಜುನ್ ಜನ್ಯ ಸಂಗೀತ, ಗಗನ್ ಗೌಡ ಛಾಯಾಗ್ರಹಣ, ರವಿವರ್ಮಾ ಸಾಹಸ ಚಿತ್ರಕ್ಕಿದೆ.

ಏಪ್ರಿಲ್ ತಿಂಗಳಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಬೆಂಗಳೂರು, ಕೊಡಗು, ಚಿಕ್ಕಮಗಳೂರು, ಕೇರಳದಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.