ADVERTISEMENT

ರಾಯರ ದರ್ಶನ ಪಡೆದ ಪುನೀತ್‌ ರಾಜ್‌ಕುಮಾರ್‌

​ಪ್ರಜಾವಾಣಿ ವಾರ್ತೆ
Published 24 ಜನವರಿ 2019, 8:43 IST
Last Updated 24 ಜನವರಿ 2019, 8:43 IST
   

ರಾಯಚೂರು: ಚಲನಚಿತ್ರ ನಟ ಪುನೀತ್‌ ರಾಜ್‌ಕುಮಾರ್‌ ಅವರು ಮಂತ್ರಾಲಯಕ್ಕೆ ಗುರುವಾರ ಭೇಟಿ ಕೊಟ್ಟು ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು.

ದರ್ಶನದ ಬಳಿಕ ಮಠದ ಪ್ರದಕ್ಷಿಣೆ ಮಾಡಿಕೊಂಡು, ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಬಳಿ ಹೋಗಿ ಆಶೀರ್ವಾದ ಪಡೆದರು.

ಆನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಯರ ದರ್ಶನಕ್ಕಾಗಿ ಈಚೆಗೆ ಬಂದಿರಲಿಲ್ಲ. ಈಗ ಅವಕಾಶ ಸಿಕ್ಕಿತು. ಮಂತ್ರಾಲಯದಲ್ಲಿರುವ ರಾಜಕುಮಾರ ಅತಿಥಿ ಭವನದ ನವೀಕರಣ ಪೂರ್ಣಗೊಂಡಿದೆ. ಇನ್ನು ಮುಂದೆ ಅದು ಸಾರ್ವಜನಿಕರ ಉಪಯೋಗಕ್ಕೆ ಬರಲಿದೆ’ ಎಂದರು.

ADVERTISEMENT

ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ನಟ ಸಾರ್ವಭೌಮ ಚಿತ್ರವು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಐಟಿ ದಾಳಿ ಮುಗಿದು ಹೋಗಿರುವ ವಿಷಯ’ ಎಂದು ತಿಳಿಸಿದರು.

ಫೆಬ್ರುವರಿಯಲ್ಲಿ ಸುಜಯೀಂದ್ರ ತೀರ್ಥರ ಜನ್ಮಶತಮಾನೋತ್ಸವ ಕಾರ್ಯಕ್ರಮವಿದ್ದು, ಭಾಗವಹಿಸುವಂತೆ ಪೀಠದ ಸ್ವಾಮಿಗಳು ಆಹ್ವಾನ ನೀಡಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.