ಹೈದರಾಬಾದ್: ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಅವರ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಸಾಯಿ ಕುಮಾರ್ (36) ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಹೈದರಾಬಾದ್ನ ಮಾಧವಪುರ ಬಳಿಯ ದುರ್ಗದ ಕೆರೆಗೆ ಜಿಗಿದುಸಾಯಿ ಕುಮಾರ್ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿರುವುದಾಗಿ ಟಾಲಿವುಡ್.ನೆಟ್ ವರದಿ ಮಾಡಿದೆ.
ರಂಗಾರೆಡ್ಡಿ ಜಿಲ್ಲೆಯ ಸಾಯಿ ಕುಮಾರ್ ಅವರು ಪುರಿ ಜಗನ್ನಾಥ್ ಬಳಿ ಕೆಲಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದರು. ಅವರು ಇತ್ತೀಚೆಗೆ ಹಣಕಾಸು ತೊಂದರೆಯಿಂದ ಕೌಟುಂಬಿಕ ಸಮಸ್ಯೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು. ತನಿಖೆ ನಡೆಯುತ್ತಿದೆ ಎಂದುಮಾಧವಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಸಿನಿಮಾ ಜಗತ್ತು ಹೊರಗೆ ಅಂದುಕೊಂಡ ಹಾಗೇ ಒಳಗೆ ಇರುವುದಿಲ್ಲ. ಇಲ್ಲಿ ಕೆಳಹಂತದಲ್ಲಿ ಕೆಲಸ ಮಾಡುವ ಅನೇಕರ ಜೀವನ ನರಕಮಯವಾಗಿದೆ ಎಂದು ಸಾಯಿ ಅವರು ತಮ್ಮ ಸ್ನೇಹಿತರ ಬಳಿ ದೂರಿಕೊಂಡಿದ್ದನ್ನು ವರದಿ ತಿಳಿಸಿದೆ.
ನಿರ್ದೇಶಕ ಪುರಿ ಜಗನ್ನಾಥ್ ಅವರ ಲೈಗರ್ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿತ್ತು. ಆದರೆ, ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡಿರಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.