ADVERTISEMENT

‘ಅಪ್ಪು’ ನೋಡಲು ಅಭಿಮಾನಿಗಳ ಸಾಗರವೇ ಹರಿದು ಬರುತ್ತಿದೆ: ರಾಘವೇಂದ್ರ ರಾಜ್‌ಕುಮಾರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ನವೆಂಬರ್ 2021, 12:22 IST
Last Updated 6 ನವೆಂಬರ್ 2021, 12:22 IST
ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿರುವ ನಟ ಪುನೀತ್ ರಾಜ್‌ಕುಮಾರ್‌ ಅವರ ಸಮಾಧಿಗೆ ಕುಟುಂಬಸ್ಥರು ಮತ್ತು ಅಭಿಮಾನಿಗಳು ನಮನ ಸಲ್ಲಿಸಿದರು-ಪ್ರಜಾವಾಣಿ ಚಿತ್ರ / ಬಿ.ಎಚ್. ಶಿವಕುಮಾರ್
ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿರುವ ನಟ ಪುನೀತ್ ರಾಜ್‌ಕುಮಾರ್‌ ಅವರ ಸಮಾಧಿಗೆ ಕುಟುಂಬಸ್ಥರು ಮತ್ತು ಅಭಿಮಾನಿಗಳು ನಮನ ಸಲ್ಲಿಸಿದರು-ಪ್ರಜಾವಾಣಿ ಚಿತ್ರ / ಬಿ.ಎಚ್. ಶಿವಕುಮಾರ್   

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್ ಅವರು ನಿಧನರಾಗಿ ಇಂದಿಗೆ ಒಂಬತ್ತು ದಿನಗಳು ಕಳೆದಿವೆ. ಪುನೀತ್ ಅಗಲಿಕೆಯ ಅಘಾತದಿಂದ ನಾಡಿನ ಜನತೆ ಹೊರಬಂದಿಲ್ಲ. ‘ಅಪ್ಪು’ ನೆನೆದು ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

ಪುನೀತ್‌ರನ್ನು ಕಳೆದುಕೊಂಡು ಪತ್ನಿ ಅಶ್ವಿನಿ, ಮಕ್ಕಳು, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಮತ್ತು ಕುಟುಂಬಸ್ಥರು ದುಃಖದಲ್ಲಿದ್ದಾರೆ. ಪ್ರತಿ ದಿನ ತಮ್ಮನೊಂದಿಗಿನ ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ಸಿಹಿ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

‘ಅಪ್ಪುನ ನೋಡಲು ಅಭಿಮಾನಿಗಳ ಸಾಗರವೇ ಹರಿದು ಬರುತ್ತಿದೆ. ನಿನ್ನೆ ಸುಮಾರು 1 ಲಕ್ಷಕ್ಕಿಂತಲೂ ಅಧಿಕ ಮಂದಿ ಬಿಸಿಲು ಹಾಗೂ ಮಳೆ ಎಂದು ಏನೂ ಲೆಕ್ಕಿಸದೆ ಅವನನ್ನು ನೋಡಲು ಬಂದಿದ್ದಾರೆ. ನಿಮ್ಮ ಅಭಿಮಾನಕ್ಕೆ ಧನ್ಯವಾದಗಳು’ ಎಂದಿರುವ ರಾಘಣ್ಣ, ಅಭಿಮಾನಿಗಳು ಸರದಿ ಸಾಲಿನಲ್ಲಿ ನಿಂತಿರುವ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ADVERTISEMENT

ಇತ್ತ ಪುನೀತ್‌ ಅಕಾಲಿಕ ನಿಧನ ಕನ್ನಡ ಚಿತ್ರರಂಗವನ್ನು ಚಿಂತೆಗೀಡು ಮಾಡಿದೆ. ‘ಅಪ್ಪು’ ಚಿತ್ರರಂಗದ ನಟ – ನಟಿಯರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಹಾಗಾಗಿ ಅವರ ನಿಧನಕ್ಕೆ ಎಲ್ಲರೂ ಕಂಬನಿ ಮಿಡಿದಿದ್ದಾರೆ. ಇತ್ತ ಸಾವಿರಾರು ಅಭಿಮಾನಿಗಳು ಕಂಠೀರವ ಸ್ಟುಡಿಯೊಗೆ ಭೇಟಿ ನೀಡಿ ಪುನೀತ್‌ ಸಮಾಧಿಗೆ ನಮನ ಸಲ್ಲಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.