‘ರಾಮನ ಸವಾರಿ’ ಚಿತ್ರ ವೂಟ್ ಸೆಲೆಕ್ಟ್ ಒಟಿಟಿಯಲ್ಲಿ ಪ್ರಸಾರ ಆರಂಭವಾಗಿದೆ. ಸುಮಾರು ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ಈ ಚಿತ್ರ ಈಗ ವೂಟ್ ವೇದಿಕೆಯಲ್ಲಿ ಜಾಗ ಪಡೆದಿದೆ.
ಕೆ. ಶಿವರುದ್ರಯ್ಯ ಈ ಚಿತ್ರದ ನಿರ್ದೇಶಕರು. ರಾಜೇಶ್ ನಟರಂಗ, ಸೋನು ಗೌಡ, ಸುಧಾ ಬೆಳವಾಡಿ, ಭಾರ್ಗವಿ ನಾರಾಯಣ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಬಾಲನಟ ಮಾಸ್ಟರ್ ಆ್ಯರೆನ್ ಚಿತ್ರದ ಮುಖ್ಯ ಪಾತ್ರಧಾರಿ ರಾಮನಾಗಿ ಅಭಿನಯಿಸಿದ್ದಾರೆ. ಕೆ.ಕಲ್ಯಾಣ್ ಅವರ ಸಾಹಿತ್ಯ ಮತ್ತು ಸಂಗೀತವಿದೆ. ಗಿರೀಶ್ ಕಾಸರವಳ್ಳಿ ಅವರು ಸಂಭಾಷಣೆ ಮತ್ತು ಚಿತ್ರಕಥೆ ಬರೆದಿದ್ದಾರೆ. ಸ್ಟ್ರೋಯ್ನಿ ಜೋಸೆಫ್ ಪಾಯ್ಸ್ ಈ ಚಿತ್ರದ ನಿರ್ಮಾಪಕರು.
ಚಿತ್ರವು ರಾಮ ಎಂಬ ಪುಟ್ಟ ಬಾಲಕನ ಪಯಣವನ್ನು ಹೇಳುತ್ತದೆ. ರಾಮ ತನ್ನ ತಾಯಿ ಮತ್ತು ಅಜ್ಜಿಯ ಜೊತೆ, ತಂದೆಯಿಂದ ದೂರವಾಗಿ ವಾಸವಾಗಿರುತ್ತಾನೆ. ಊರಿನ ಜಾತ್ರೆಯಲ್ಲಿ ಆಕಸ್ಮಾತ್ ತನ್ನ ತಂದೆಯನ್ನು ಮೊದಲ ಬಾರಿ ಭೇಟಿಯಾಗುತ್ತಾನೆ. ಒಡೆದು ಹೋದ ಕುಟುಂಬವನ್ನು ಜೋಡಿಸಲು ರಾಮ ಹೇಗೆ ಸೇತುವೆಯಾಗುತ್ತಾನೆ ಎಂಬುದು ಚಿತ್ರದ ಕಥೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.