ADVERTISEMENT

‘ಹರಿಕಥೆ ಅಲ್ಲಾ ಗಿರಿಕಥೆ’ ಚಿತ್ರಕ್ಕೆ ಮುಹೂರ್ತ

​ಪ್ರಜಾವಾಣಿ ವಾರ್ತೆ
Published 22 ಜೂನ್ 2020, 11:20 IST
Last Updated 22 ಜೂನ್ 2020, 11:20 IST
‘ಹರಿಕಥೆ ಅಲ್ಲಾ ಗಿರಿಕಥೆ’ ಸಿನಿಮಾಕ್ಕೆ ಇತ್ತೀಚೆಗೆ ಬೆಂಗಳೂರಿನಲ್ಲಿ ಮುಹೂರ್ತ ನೆರವೇರಿತು
‘ಹರಿಕಥೆ ಅಲ್ಲಾ ಗಿರಿಕಥೆ’ ಸಿನಿಮಾಕ್ಕೆ ಇತ್ತೀಚೆಗೆ ಬೆಂಗಳೂರಿನಲ್ಲಿ ಮುಹೂರ್ತ ನೆರವೇರಿತು   

ಸಂದೇಶ್ ಪ್ರೊಡಕ್ಷನ್ಸ್ ಮತ್ತು ರಿಷಬ್ ಶೆಟ್ಟಿ ಫಿಲಂಸ್‌ ಸಹಭಾಗಿತ್ವದಡಿ ಇತ್ತೀಚೆಗೆ ಬೆಂಗಳೂರಿನಲ್ಲಿ ‘ಹರಿಕಥೆ ಅಲ್ಲಾ ಗಿರಿಕಥೆ’ ಚಿತ್ರಕ್ಕೆ ಮುಹೂರ್ತ ನೆರವೇರಿತು.

ಕನ್ನಡ ಚಿತ್ರರಂಗಕ್ಕೆ ನಿರ್ದೇಶಕರಾಗಿ ಅಡಿ ಇಟ್ಟ ರಿಷಬ್ ಶೆಟ್ಟಿ ‘ಬೆಲ್‌ ಬಾಟಂ’ ಚಿತ್ರದ ಮೂಲಕ ನಾಯಕ ನಟನಾಗಿ ಯಶಸ್ಸು ಕಂಡಿದ್ದು ಎಲ್ಲರಿಗೂ ಗೊತ್ತು. ‘ಹರಿಕಥೆ ಅಲ್ಲಾ ಗಿರಿಕಥೆ’ ಚಿತ್ರಕ್ಕೆ ಅವರೇ ನಾಯಕ.

‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ನಟನಾಗಿ ಕಾಣಿಸಿಕೊಂಡಿದ್ದ ಗಿರಿಕೃಷ್ಣ ಇದಕ್ಕೆ ಆ್ಯಕ್ಷನ್‌ ಕಟ್‌ ಹೇಳಲಿದ್ದಾರೆ. ಇದು ಅವರಿಗೆ ಮೊದಲ ಚಿತ್ರ. ‘ಕಿರಿಕ್ ಪಾರ್ಟಿ’ ಸೇರಿದಂತೆ ಹಲವು ಸಿನಿಮಾಗಳಿಗೆ ಸಂಗೀತ ನೀಡಿದ್ದ ಅಜನೀಶ್ ಲೋಕನಾಥ್ ಅವರೇ ಇದಕ್ಕೂ ಸಂಗೀತ ಸಂಯೋಜಿಸುತ್ತಿದ್ದಾರೆ. ‘ಕಥಾ ಸಂಗಮ’ ಚಿತ್ರದಲ್ಲಿ ಛಾಯಾಗ್ರಾಹಕರಾಗಿ ಕೆಲಸ ನಿರ್ವಹಿಸಿದ್ದ ರಂಗನಾಥ್ ಸಿ.ಎಂ. ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ADVERTISEMENT

ಇಂದಿನ ತಲೆಮಾರಿನ ಯುವಜನರಿಗೆ ಸಂಬಂಧಿಸಿದ ಕಥೆ ಇದು. ಅವರ ಹೆಣಗಾಟ, ಹುಡುಗಾಟಗಳನ್ನೇ ತೆರೆಯ ಮೇಲೆ ಹಾಸ್ಯಮಯವಾಗಿ ಹೇಳಲು ನಿರ್ದೇಶಕರು ನಿರ್ಧರಿಸಿದ್ದಾರಂತೆ.

ಮೊದಲ ದೃಶ್ಯಕ್ಕೆ ರಿಷಬ್ ಶೆಟ್ಟಿ ಅವರ ಪುತ್ರ ಮಾಸ್ಟರ್ ರಣವೀತ್ ಶೆಟ್ಟಿ ಆರಂಭ ಫಲಕ ತೋರಿದರು. ನಿರ್ಮಾಪಕ ಸಂದೇಶ್ ಎನ್. ಕ್ಯಾಮೆರಾ ಚಾಲನೆ ಮಾಡಿದರು. ರಾಜ್ಯ ಸರ್ಕಾರದ ಮಾರ್ಗಸೂಚಿ ಪ್ರಕಟಗೊಂಡ ಬಳಿಕ ಬೆಂಗಳೂರಿನಲ್ಲಿಯೇ ಮೊದಲ ಹಂತದ ಶೂಟಿಂಗ್‌ ನಡೆಸಲು ಚಿತ್ರತಂಡ ಸಿದ್ಧತೆ ನಡೆಸಿದೆ.

ಪ್ರಗತಿ ಶೆಟ್ಟಿ, ನಟ ರಕ್ಷಿತ್ ಶೆಟ್ಟಿ, ಪ್ರಮೋದ್ ಶೆಟ್ಟಿ, ವಿತರಕ ಜಯಣ್ಣ, ಕೆ.ಆರ್. ಪೇಟೆ ಮಂಜಣ್ಣ ಚಿತ್ರತಂಡಕ್ಕೆ ಶುಭ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.