ADVERTISEMENT

ಕಾಂತಾರಕ್ಕೆ ಜಯ | ವರಾಹ ರೂಪಂ ಕೇಸ್ ಗೆದ್ದಿದ್ದೇವೆ: ರಿಷಬ್ ಶೆಟ್ಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಡಿಸೆಂಬರ್ 2022, 10:16 IST
Last Updated 3 ಡಿಸೆಂಬರ್ 2022, 10:16 IST
ನವರಸಂ vs ವರಾಹ ರೂಪಂ
ನವರಸಂ vs ವರಾಹ ರೂಪಂ   

ಜನಪ್ರಿಯ ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿಗೆ ಎದುರಾದ ಅಡೆತಡೆ ನಿವಾರಣೆಯಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ, ದೈವಾನು ದೈವಗಳ ಆಶೀರ್ವಾದ ಹಾಗೂ ಜನರ ಅಭಿಮಾನದಿಂದ ವರಾಹ ರೂಪಂ ಕೇಸ್ ಗೆದ್ದಿದ್ದೇವೆ ಎಂದು ತಿಳಿಸಿದ್ದಾರೆ.

ಅಲ್ಲದೆ ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ OTT ಫ್ಲ್ಯಾಟ್‌ಫಾರ್ಮ್‌ನಲ್ಲಿ ಹಾಡನ್ನು ಬದಲಾಯಿಸುವುದಾಗಿ ಖಚಿತಪಡಿಸಿದ್ದಾರೆ.

ADVERTISEMENT

ಕೇರಳದ ಪ್ರಸಿದ್ಧ ಮ್ಯೂಸಿಕ್ ಬ್ಯಾಂಡ್ ತೈಕುಡಂ ಬ್ರಿಡ್ಜ್ ತಮ್ಮ 'ನವರಸಂ' ಆಲ್ಬಂನಲ್ಲಿರುವ ಹಾಡು ಮತ್ತದರ ಸಂಗೀತ ವರಾಹರೂಪಂ ಹಾಡಿಗೆ ಹೋಲಿಕೆಯಾಗುತ್ತಿದ್ದು, ಇದು ಕೃತಿಚೌರ್ಯ ಎಂದು ಆರೋಪಿಸಿತ್ತಲ್ಲದೆ ನ್ಯಾಯಾಲಯದ ಮೆಟ್ಟಿಲೇರಿತ್ತು.

ಬಳಿಕ ಅಮೇಜಾನ್ ಪ್ರೈಂ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾದ ಕಾಂತಾರ ಸಿನಿಮಾದಲ್ಲೂ ವರಾಹ ರೂಪಂ ಹಾಡನ್ನು ತೆಗೆದು ಹಾಕಲಾಗಿತ್ತು.

ಕೊನೆಗೂ ನ್ಯಾಯಾಲಯದಲ್ಲಿ ಕಾಂತಾರ ಹೋರಾಟಕ್ಕೆ ಜಯ ಸಿಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.