ADVERTISEMENT

ಕಾಡ್ಗಿಚ್ಚು, ಕಾಡಾನೆ ತೊಂದರೆ: ಸಿ.ಎಂ ಭೇಟಿಯಾಗಿ ಮನವಿ ಸಲ್ಲಿಸಿದ ರಿಷಬ್‌ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2023, 10:39 IST
Last Updated 8 ಮಾರ್ಚ್ 2023, 10:39 IST
ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ ರಿಷಬ್‌ ಶೆಟ್ಟಿ
ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ ರಿಷಬ್‌ ಶೆಟ್ಟಿ   

ಬೆಂಗಳೂರು: ‘ಕಾಂತಾರ’ ಸಿನಿಮಾದ ಭಾಗವಾಗಿ ಹಲವು ತಿಂಗಳು ಕಾಡಂಚಿನಲ್ಲಿ ದಿನ ಕಳೆದಿದ್ದ ನಟ ರಿಷಬ್‌ ಶೆಟ್ಟಿ ಅವರು, ಇದೀಗ ಕಾಡಂಚಿನ ಜನರು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬುಧವಾರ ಮನವಿಯೊಂದನ್ನು ಸಲ್ಲಿಸಿದ್ದಾರೆ.

‘ಕಾಂತಾರ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ಹಾಗೂ ಬಳಿಕ ನಾನು ಹೆಚ್ಚು ಕಾಡು ಮತ್ತು ಕಾಡಂಚಿನ ಪ್ರದೇಶಗಳಲ್ಲಿ ಸುತ್ತಾಡಿದ್ದೇನೆ. ಅರಣ್ಯ ಇಲಾಖೆಯ ಜೊತೆ ರಾಯಭಾರಿಯ ರೀತಿ ಕೆಲಸ ಮಾಡುತ್ತಾ ಅರಣ್ಯ ರಕ್ಷಣೆಯ ವೇಳೆ ಇಲಾಖೆಯ ಸಿಬ್ಬಂದಿ ಮತ್ತು ಕಾಡಂಚಿನ ಪ್ರದೇಶಗಳ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅರಿತುಕೊಂಡೆ. ಉದಾಹರಣೆಗೆ ಕೃಷಿಕರು ಎದುರಿಸುತ್ತಿರುವ ಕಾಡಾನೆಯ ಹಾವಳಿ, ಕಾಡ್ಗಿಚ್ಚು ಸಂಭವಿಸಿದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವಾಚರ್‌ಗಳು ಎದುರಿಸುವ ಕಷ್ಟಗಳು, ಅವರ ನೇಮಕಾತಿಯಲ್ಲಿ ಆಗುತ್ತಿರುವ ವಿಳಂಬ ಹೀಗೆ ಹಲವು ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಂಡೆ. ಇವುಗಳನ್ನು ಕ್ರೋಡೀಕರಿಸಿ ಮುಖ್ಯಮಂತ್ರಿಗಳಿಗೆ 20 ಅಂಶಗಳ ವಿವರವಾದ ಮನವಿಯನ್ನು ಸಲ್ಲಿಸಿದ್ದೇನೆ. ಅತಿ ಶೀಘ್ರದಲ್ಲೇ ಇವುಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಆದೇಶ ನೀಡುವುದಾಗಿ ಸಿ.ಎಂ ಭರವಸೆ ನೀಡಿದ್ದಾರೆ’ ಎಂದು ಭೇಟಿ ಬಳಿಕ ರಿಷಬ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT