ADVERTISEMENT

ಸದ್ಯಕ್ಕಿಲ್ಲ ರಾಬರ್ಟ್‌ ವಿಜಯ ಯಾತ್ರೆ: ದರ್ಶನ್‌ ಟ್ವೀಟ್‌

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2021, 16:38 IST
Last Updated 27 ಮಾರ್ಚ್ 2021, 16:38 IST
ದರ್ಶನ್‌
ದರ್ಶನ್‌   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಳ ಆಗುತ್ತಿರುವ ಕಾರಣದಿಂದಾಗಿ, ರಾಬರ್ಟ್‌ ಚಿತ್ರತಂಡವು ತನ್ನ ವಿಜಯ ಯಾತ್ರೆಯನ್ನು ಮುಂದೂಡಿದೆ.

ಈ ಕುರಿತು ಸ್ವತಃ ದರ್ಶನ್‌ ಅವರೇ ಟ್ವೀಟ್‌ ಮಾಡಿದ್ದು, ‘ನೀವು ನಮ್ಮ ಚಿತ್ರಕ್ಕೆ ಅಪಾರ ಬೆಂಬಲವನ್ನು ನೀಡಿ ದೊಡ್ಡ ಮಟ್ಟದ ಯಶಸ್ಸಿಗೆ ಕಾರಣರಾಗಿದ್ದೀರಿ. ಅದಕ್ಕೆಂದೇ ವಿಜಯಯಾತ್ರೆ ಮೂಲಕ ನಿಮ್ಮ ಊರಿಗೆ ಬಂದು ಧನ್ಯವಾದಗಳು ಸಲ್ಲಿಸಬೇಕೆಂದು ವೇಳಾಪಟ್ಟಿ ಸಿದ್ಧಪಡಿಸಿಕೊಂಡಿದ್ದೆವು. ಕೊರೊನಾ ಎರಡನೇ ಅಲೆ ಕಾರಣ, ಎಲ್ಲೆಡೆ ಹೋಗಲು ಅನುಮತಿ ಸಿಗುವುದು ಕಷ್ಟವಾಗಿದೆ. ನಿಮ್ಮ ಆರೋಗ್ಯವೇ ನಮ್ಮ ಹಾಗೂ ಸರ್ಕಾರದ ಮೊದಲ ಆದ್ಯತೆ. ದಯಮಾಡಿ ಮಾಸ್ಕ್ ಧರಿಸಿ ನಿಮ್ಮ ಜಾಗೃತೆಯಲ್ಲಿರಿ. ಈಗಿನ ಪರಿಸ್ಥಿತಿ ಸುಧಾರಿಸುತ್ತಿದ್ದಂತೆ ನಾವು ಖಂಡಿತ ನಿಮ್ಮ ಊರಿಗೆ ಆಗಮಿಸುತ್ತೇವೆ. ನಿಮ್ಮ ಪ್ರೀತಿ-ವಿಶ್ವಾಸ ಸದಾ ಹೀಗೆ ಇರಲಿ– ಇಂತಿ ನಿಮ್ಮ ಪ್ರೀತಿಯ ದಾಸ’ ಎಂದು ಉಲ್ಲೇಖಿಸಿದ್ದಾರೆ.

ವಿಜಯ ಯಾತ್ರೆ ಮಾರ್ಚ್‌ 29ರಂದು ತುಮಕೂರಿನಿಂದ ಆರಂಭವಾಗಬೇಕಿತ್ತು. ಇದಕ್ಕಾಗಿ ವೇಳಾಪಟ್ಟಿಯನ್ನೂ ಪ್ರಕಟಿಸಿದ್ದ ಚಿತ್ರತಂಡ ನಾಲ್ಕು ದಿನಗಳ ಕಾಲ ತುಮಕೂರು, ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಹಾವೇರಿ, ಶಿವಮೊಗ್ಗ, ಹಾಸನ, ತಿಪಟೂರು, ಗುಂಡ್ಲುಪೇಟೆ, ಮೈಸೂರು, ಮಂಡ್ಯ ಮತ್ತು ಮದ್ದೂರಿನಲ್ಲಿ ಅಭಿಮಾನಿಗಳನ್ನು ಭೇಟಿಯಾಗಲು ಈ ಹಿಂದೆ ನಿರ್ಧರಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.