ADVERTISEMENT

ಉಡುಪಿ ಕೃಷ್ಣ ಮಠಕ್ಕೆ ನಟ ಯಶ್ ಭೇಟಿ: ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 5:28 IST
Last Updated 7 ಫೆಬ್ರುವರಿ 2022, 5:28 IST
ನಟ ಯಶ್ ಅವರು ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ನಟ ಯಶ್ ಅವರು ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.   

ಉಡುಪಿ: ಚಿತ್ರನಟ ಯಶ್‌ ಭಾನುವಾರ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಯಶ್‌ರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು. ರಥಬೀದಿಯಲ್ಲಿ ಹಲವರು ಸೆಲ್ಫಿ ಕ್ಲಿಕ್ಕಿಸಿಕೊಂಡರು.

ಮೊದಲು ಕನಕನ ಕಿಂಡಿಯಲ್ಲಿ ದೇವರ ದರ್ಶನ ಪಡೆದ ಯಶ್‌ ಬಳಿಕ ಗರ್ಭಗುಡಿ ಎದುರಿಗಿರುವ ನವಗ್ರಹ ಕಿಂಡಿಗಳ ಮೂಲಕ ದೇವರ ದರ್ಶನ ಮಾಡಿದರು.

ಬಳಿಕ ಪರ್ಯಾಯ ಕೃಷ್ಣಾಪುರ ಮಠದ ದಿವಾನರಾದ ವರದರಾಜ ಆಚಾರ್ ಅವರು ಪ್ರಸಾದ ನೀಡಿದರು. ಕೃಷ್ಣಾಪುರ ಮಠಕ್ಖೂ ಭೇಟಿನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.