ADVERTISEMENT

ಕೋವಿಡ್ ಸೋಂಕು ಚಿತ್ರಮಂದಿರಕ್ಕಷ್ಟೇ ಅಂಟಿಕೊಳ್ಳುತ್ತದೆಯೇ?: ದುನಿಯಾ ವಿಜಯ್‌

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2021, 19:30 IST
Last Updated 4 ಏಪ್ರಿಲ್ 2021, 19:30 IST
ದುನಿಯಾ ವಿಜಯ್
ದುನಿಯಾ ವಿಜಯ್   

ಹುಬ್ಬಳ್ಳಿ: ‘ಕೋವಿಡ್‌ ಸೋಂಕು ಬಹಳ ಚಾಣಾಕ್ಷ; ಜಿಮ್‌ ಹಾಗೂ ಚಿತ್ರಮಂದಿರಗಳಿಗೆ ಬರುವ ಜನರಿಗೆ ಮಾತ್ರ ಅಂಟಿಕೊಳ್ಳುತ್ತದೆ. ರಾಜಕೀಯ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಸಮಾರಂಭಗಳತ್ತ ಸೋಂಕು ಸುಳಿಯುವುದಿಲ್ಲ’ ಎಂದು ನಟ ದುನಿಯಾ ವಿಜಯ್‌ ಲೇವಡಿ ಮಾಡಿದರು.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಚಿತ್ರ ಮಂದಿರಗಳಲ್ಲಿ ಏ. 7ರ ತನಕ ಮಾತ್ರ ಶೇ 100ರಷ್ಟು ಜನರಿಗೆ ಅವಕಾಶ ನೀಡಲಾಗುವುದು ಎಂದು ಹೇಳಿರುವ ಸರ್ಕಾರದ ನಿರ್ಧಾರದಿಂದ ಆಘಾತವಾಗಿದೆ. ಸರ್ಕಾರದಿಂದ ಆದ ಈ ಅನ್ಯಾಯವನ್ನು ಸರ್ಕಾರವೇ ಸರಿಪಡಿಸಬೇಕು’ ಎಂದು ಆಗ್ರಹಿಸಿದರು.

‘ಸರ್ಕಾರದ ಲೆಕ್ಕಾಚಾರದ ಹಿಂದೆ ಯಾವುದೇ ತರ್ಕವಿಲ್ಲ. ಶೇ 100ರಷ್ಟು ಸೀಟುಗಳ ಭರ್ತಿಗೆ ಅವಕಾಶ ಕೊಟ್ಟರೆ ಒಂದೂವರೆ ವರ್ಷದಿಂದ ಸಂಕಷ್ಟಕ್ಕೆ ಸಿಲುಕಿರುವ ಸಿನಿಮಾ ರಂಗ ಹಾಗೂ ಕಲಾವಿದರು ಬದುಕಿಕೊಳ್ಳುತ್ತಾರೆ. ಇಂಥ ಸಂದರ್ಭದಲ್ಲಿಯೇ ಸರ್ಕಾರ ನಿರ್ಬಂಧ ಹೇರುವುದು ಸರಿಯೇ?’ ಎಂದು ಪ್ರಶ್ನಿಸಿದರು.

ADVERTISEMENT

’ಸಲಗ’ ಸಿನಿಮಾದ ನಿರ್ಮಾಪಕ ಕೆ.ಪಿ. ಶ್ರೀಕಾಂತ್ ಮಾತನಾಡಿ ‘ಸಿನಿಮಾದ ಚಿತ್ರೀಕರಣ ಹಾಗೂ ಉಳಿದ ಕೆಲಸಗಳು ಪೂರ್ಣಗೊಂಡು ವರ್ಷ ಕಳೆದಿದೆ. ಆದರೆ, ಸರ್ಕಾರದ ಆದೇಶದಿಂದ ಸಿನಿಮಾ ಬಿಡುಗಡೆಗೆ ಹಿಂದೇಟು ಹಾಕಲಾಗುತ್ತಿದ್ದು, ಶೇ 100ರಷ್ಟು ಸೀಟುಗಳ ಭರ್ತಿಗೆ ಅವಕಾಶ ಕೊಟ್ಟರಷ್ಟೇ ‘ಸಲಗ’ ಬಿಡುಗಡೆ ಮಾಡಲಾಗುವುದು’ ಎಂದ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.