ADVERTISEMENT

ಕಾಶ್ಮೀರದಲ್ಲಿ ‘ಖುಷಿ‘ ಶೂಟಿಂಗ್: ವಾಹನ ಉರುಳಿ ವಿಜಯ್ ದೇವರಕೊಂಡ–ಸಮಂತಾಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಮೇ 2022, 6:50 IST
Last Updated 24 ಮೇ 2022, 6:50 IST
ವಿಜಯ್ ದೇವರಕೊಂಡ ಮತ್ತು ಸಮಂತಾ ರುತ್ ಪ್ರಭು
ವಿಜಯ್ ದೇವರಕೊಂಡ ಮತ್ತು ಸಮಂತಾ ರುತ್ ಪ್ರಭು    

ಬೆಂಗಳೂರು: ವಿಜಯ್ ದೇವರಕೊಂಡ ಮತ್ತು ಸಮಂತಾ ರುತ್ ಪ್ರಭು ನಟನೆಯ 'ಖುಷಿ‘ ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಕಾಶ್ಮೀರದಲ್ಲಿ ವಾಹನ ಅಪಘಾತ ಸಂಭವಿಸಿದೆ.

ಅವಘಡದಲ್ಲಿ ವಿಜಯ್ ಮತ್ತು ಸಮಂತಾ ಅವರಿಗೆ ಗಾಯವಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಯಾಗಿದೆ.

ಕಾಶ್ಮೀರದಲ್ಲಿ ಆ್ಯಕ್ಷನ್ ಸೀನ್ ಶೂಟಿಂಗ್ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

ADVERTISEMENT

ಶನಿವಾರ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ವಿಜಯ್ ಮತ್ತು ಸಮಂತಾ ಅವರು ಚಿಕಿತ್ಸೆ ಪಡೆದು ಮರಳಿ ಬಂದ ಬಳಿಕ ಮತ್ತೆ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಕಳೆದ ವಾರ ‘ಖುಷಿ‘ ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿತ್ತು. ಸಿನಿಮಾ ಡಿಸೆಂಬರ್ 23ರಂದು ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.