ADVERTISEMENT

ಸಂಚಾರಿ ವಿಜಯ್‌ ನಿಧನ: ಗಣ್ಯರು, ಅಭಿಮಾನಿಗಳು, ಸಾರ್ವಜನಿಕರಿಂದ ಅಂತಿಮ ದರ್ಶನ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 3:53 IST
Last Updated 15 ಜೂನ್ 2021, 3:53 IST
ಸಾರ್ವಜನಿಕರಿಂದ ಅಂತಿಮ ದರ್ಶನ
ಸಾರ್ವಜನಿಕರಿಂದ ಅಂತಿಮ ದರ್ಶನ   

ಬೆಂಗಳೂರು:ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿದ್ದು ಗಣ್ಯರು ಸೇರಿದಂತೆ ಸಾರ್ವಜನಿಕರು ಅಂತಿಮ ದರ್ಶನ ಪಡೆದರು.

ಆಸ್ಪತ್ರೆಯಿಂದ ನೇರವಾಗಿ ಪಾರ್ಥಿವ ಶರೀರವನ್ನು ಕಲಾಕ್ಷೇತ್ರಕ್ಕೆ ತರಲಾಯಿತು. ಸಂಚಾರಿ ವಿಜಯ್‌ ಅವರ ಕುಟುಂಬದವರು ಮೊದಲು ದರ್ಶನ ಪಡೆದರು. ಬಳಿಕ ಸಾರ್ವಜನಿಕರು, ಸ್ನೇಹಿತರು, ಅಭಿಮಾನಿಗಳು, ರಾಜಕೀಯ ನಾಯಕರು, ಸಿನಿಮಾರಂಗದವರು ಅಂತಿಮ ದರ್ಶನ ಪಡೆದರು.

ಮಂಗಳವಾರ ಸಂಜೆಯ ಒಳಗೆ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಅವರು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಪಂಚನಹಳ್ಳಿಯ ಅಂತ್ಯಸಂಸ್ಕಾರ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.