ADVERTISEMENT

ಶೂಟಿಂಗ್ ಸೆಟ್‌ನಲ್ಲಿ ನಟ ಶರಣ್ ಅಸ್ವಸ್ಥ: ಮಲ್ಲಿಗೆ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 10:08 IST
Last Updated 26 ಸೆಪ್ಟೆಂಬರ್ 2020, 10:08 IST
ನಟ ಶರಣ್
ನಟ ಶರಣ್   

ಬೆಂಗಳೂರು: ಸಿನಿಮಾ ಶೂಟಿಂಗ್ ವೇಳೆ ಅಸ್ವಸ್ಥರಾದ ನಟ ಶರಣ್ ಅವರನ್ನು‌ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಂಪಲ್‌ ಸುನಿ ನಿರ್ದೇಶನದ 'ಅವತಾರ ಪುರುಷ' ಸಿನಿಮಾದ ಚಿತ್ರೀಕರಣದಲ್ಲಿ ಶರಣ್‌ ಇಂದು‌ ಬೆಳಿಗ್ಗೆ ಪಾಲ್ಗೊಂಡಿದ್ದರು. ಎಚ್ಎಂಟಿ ಗ್ರೌಂಡ್‌ನಲ್ಲಿ ಇದರ‌ ಕೊನೆಯ‌ ಹಂತದ ಶೂಟಿಂಗ್‌ ನಡೆಯುತಿದೆ. ಸಾಹಸ ದೃಶ್ಯದ ವೇಳೆ ಅವರಿಗೆ‌ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಶರಣ್ ಅವರ‌ ಸಹೋದರಿ ಹಾಗೂ‌ ನಟಿ ಶ್ರುತಿ ಅವರು ಆಸ್ಪತ್ರೆಗೆ ಭೇಟಿ‌ ನೀಡಿ ಸಹೋದರನ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.

ADVERTISEMENT

'ಹೊಟ್ಟೆ ನೋವಿನಿಂದ ಶರಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರಿಗೆ ಚಿಕಿತ್ಸೆ‌ ನೀಡಿದ್ದಾರೆ. ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ' ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.