ಬೆಂಗಳೂರು: ನಗರದ ಮಾಗಡಿ ರಸ್ತೆ ಪ್ರದೇಶದಲ್ಲಿ ಸಿನಿಮಾ ಚಿತ್ರಿಕರಣದ ವೇಳೆ ನಡೆದ ಬಾಂಬ್ ಸಿಡಿತದಿಂದ ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ಗಾಯಗಳಾಗಿವೆ.
‘ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ನಾಯಕ ನಟನೆಯ 'ಕೆಡಿ' ಚಿತ್ರದ ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದೆ. ದತ್ ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ದತ್ ಅವರ ಮುಖ ಮತ್ತು ಮೊಣಕೈಗೆ ಗಾಯಗಳಾಗಿವೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಮೂಲಗಳು ಹೇಳಿವೆ.
ಈ ಬಗ್ಗೆ ಮಾಹಿತಿಗೆ ಚಿತ್ರ ತಂಡದವರು ಸಂಪರ್ಕಕ್ಕೆ ಸಿಗಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.