ADVERTISEMENT

ಲತಾ ಮಂಗೇಶ್ಕರ್‌ ಅಂತ್ಯಕ್ರಿಯೆ: ಟ್ರೋಲ್‌ಗೊಳಗಾದ ಶಾರುಖ್ ಖಾನ್‌ 

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 16:27 IST
Last Updated 7 ಫೆಬ್ರುವರಿ 2022, 16:27 IST
ಶಾರುಖ್ ಖಾನ್‌
ಶಾರುಖ್ ಖಾನ್‌   

ಮುಂಬೈ: ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಅವರ ಅಂತ್ಯಕ್ರಿಯೆ ಸಂದರ್ಭದಲ್ಲಿ ಬಾಲಿವುಡ್‌ ನಟ ಶಾರುಖ್ಖಾನ್‌ ಅವರು ಪ್ರಾರ್ಥಿಸಿದ ರೀತಿಯು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ ಆಗಿದ್ದು, ವಾಗ್ವಾದಕ್ಕೆ ಕಾರಣವಾಗಿದೆ.

ಶಿವಾಜಿ ಪಾರ್ಕ್‌ನಲ್ಲಿ ಭಾನುವಾರ ನಡೆದ ಅಂತ್ಯಕ್ರಿಯೆಯಲ್ಲಿ ಶಾರುಖ್ಅವರು ತಮ್ಮ ಮ್ಯಾನೇಜರ್‌ ಪೂಜಾ ದದ್ಲಾನಿ ಅವರೊಂದಿಗೆ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದ್ದರು. ಈ ವೇಳೆ ಅವರು ಮಾಸ್ಕ್‌ ತೆರೆದು ದುಷ್ಟಶಕ್ತಿಗಳನ್ನು ದೂರವಿಡಲು ಗಾಳಿಯಲ್ಲಿ ಊದಿದರು.

ಈ ವಿಡಿಯೊ ವೈರಲ್ ಆಗಿದ್ದು ವಾಗ್ವಾದಕ್ಕೆ ಕಾರಣವಾಗಿದೆ. ಹರಿಯಾಣದ ಬಿಜೆಪಿ ಐಟಿ ಘಟಕದ ಉಸ್ತುವಾರಿ ಅರುಣ್‌ ಯಾದವ್‌ ಅವರು ‘ಕ್ಯಾ ಇಸ್ನೆ ಥೂಕಾ ಹೈ’ (ಅವರು ಉಗುಳಿದ್ದಾರೆಯೇ?) ಎಂದು ಪ್ರಶ್ನಿಸಿ ವಿವಾದ ಸೃಷ್ಟಿಸಿದ್ದಾರೆ.

ADVERTISEMENT

ಲತಾ ಅವರ ಸ್ಮಾರಕಕ್ಕೆ ಬಿಜೆಪಿ ಒತ್ತಾಯ:

ಮುಂಬೈ: ಗಾಯಕಿ ಲತಾ ಮಂಗೇಶ್ಕರ್‌ ಅವರ ಅಂತ್ಯಕ್ರಿಯೆ ನಡೆದ ಇಲ್ಲಿನ ಶಿವಾಜಿ ಪಾರ್ಕ್‌ನಲ್ಲಿ ಅವರ ಗೌರವಾರ್ಥ ಸ್ಮಾರಕ ನಿರ್ಮಿಸುವಂತೆ ಬಿಜೆಪಿ ಒತ್ತಾಯಿಸಿದೆ.

ಅಂತ್ಯಕ್ರಿಯೆ ನಡೆದ ಒಂದು ದಿನದ ಬಳಿಕ ಬಿಜೆಪಿ ಶಾಸಕ ರಾಮ್‌ ಕದಂ ಅವರು ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.