ADVERTISEMENT

ಶುರುವಾಗಿದೆ ‘ಶಂಭೋ ಶಿವ ಶಂಕರ’ನ ಮಾತು

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 19:30 IST
Last Updated 17 ಜೂನ್ 2021, 19:30 IST
ಅಭಯ್‌ ಪುನೀತ್‌
ಅಭಯ್‌ ಪುನೀತ್‌   

ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಿಸುತ್ತಿರುವ ‘ಶಂಭೋ ಶಿವ ಶಂಕರ’ ಚಿತ್ರಕ್ಕೆ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ.

ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡು ಹಾಗೂ ಸಾಹಸ ಸನ್ನಿವೇಶ ಚಿತ್ರೀಕರಣ ಬಾಕಿಯಿದೆ. ಶಂಕರ್ ಕೋನಮಾನಹಳ್ಳಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರದ್ದು. ಗೌಸ್‌ಪೀರ್ ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಸಂಗೀತ ನೀಡುತ್ತಿದ್ದಾರೆ‌.

ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನವಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.