ವರ್ತೂರು ಮಂಜು ನಿರ್ಮಾಣದ, ಶಂಕರ್ ಕೋನಮಾನಹಳ್ಳಿ ನಿರ್ದೇಶನದ ‘ಶಂಭೋ ಶಿವ ಶಂಕರ’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಹಾಗೂ ನಟ ವಸಿಷ್ಠ ಸಿಂಹ ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ನವೀನ್ ಸಜ್ಜು ಹಾಡಿರುವ ಚಿತ್ರದ ‘ನಾಟಿಕೋಳಿ’ ಹಾಡು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡತ್ತಿದೆ. ಕಿರುತೆರೆಯಲ್ಲಿ ಧಾರಾವಾಹಿಗಳನ್ನು ನಿರ್ದೇಶಿಸಿದ್ದ ಶಂಕರ್ ಅವರ ಚೊಚ್ಚಲ ಚಿತ್ರ ಇದಾಗಿದೆ. ಅಭಯ್ ಪುನೀತ್ ಈ ಸಿನಿಮಾದ ಮುಖಾಂತರ ಚಂದನವನಕ್ಕೆ ನಾಯಕನಾಗಿ ಹೆಜ್ಜೆ ಇಡುತ್ತಿದ್ದು, ಸೋನಲ್ ಮೊಂತೆರೋ ನಾಯಕಿಯಾಗಿ ಬಣ್ಣಹಚ್ಚಿದ್ದಾರೆ. ಆನಂದ್ ಆಡಿಯೋ ಮೂಲಕ ಚಿತ್ರದ ಹಾಡುಗಳ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಸಿನಿಮಾ ತೆರೆಗೆ ಬರಲಿದೆ ಎಂದು ಚಿತ್ರತಂಡವು ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.