ADVERTISEMENT

ನಟ ದರ್ಶನ್ ಮೇಲಿನ ಕೃತ್ಯ ಮನಸ್ಸಿಗೆ ನೋವುಂಟು ಮಾಡಿದೆ: ಶಿವರಾಜ್​ ಕುಮಾರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಡಿಸೆಂಬರ್ 2022, 16:15 IST
Last Updated 19 ಡಿಸೆಂಬರ್ 2022, 16:15 IST
ಶಿವರಾಜ್​ ಕುಮಾರ್
ಶಿವರಾಜ್​ ಕುಮಾರ್   

ಬೆಂಗಳೂರು:ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ.ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ನಟ ಶಿವರಾಜ್ ಕುಮಾರ್ ವಿನಂತಿಸಿದ್ದಾರೆ.

ಭಾನುವಾರ ಕ್ರಾಂತಿಸಿನಿಮಾದ ಹಾಡು ಬಿಡುಗಡೆ ಸಮಾರಂಭದಲ್ಲಿ ನಟಿ ರಚಿತಾ ರಾಮ್ ಮಾತನಾಡುವಾಗ ಅವರ ಬಳಿ ನಿಂತಿದ್ದ‌ ನಟ ದರ್ಶನ್ ಮೇಲೆ ಜನರ ನಡುವಿನಿಂದ ವ್ಯಕ್ತಿಯೊಬ್ಬರುಶೂ ಎಸೆದಿದ್ದರು.

ನಟರಾದ ಪ್ರೇಮ್, ಶರಣ್, ಲೂಸ್ ಮಾದ ಯೋಗಿ, ಅಭಿಷೇಕ್ ಅಂಬರೀಶ, ಪ್ರಜ್ವಲ್ ದೇವರಾಜ್ ಸೇರಿದಂತೆ ಸಾಕಷ್ಟು ನಟ ನಟಿಯರು ಈ ಘಟನೆಯನ್ನು ಖಂಡಿಸಿದ್ದರು.

ADVERTISEMENT

‘ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ. ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲ‘ ಎಂದು ನಟ ಶಿವರಾಜ್‌ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.