ADVERTISEMENT

‘ಬಘೀರ’ನಾಗಿ ತೆರೆ ಮೇಲೆ ಬರಲಿದ್ದಾರೆ ಶ್ರೀ ಮುರಳಿ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2020, 9:15 IST
Last Updated 17 ಡಿಸೆಂಬರ್ 2020, 9:15 IST
ಬಘೀರ ಚಿತ್ರದ ಪೋಸ್ಟರ್‌
ಬಘೀರ ಚಿತ್ರದ ಪೋಸ್ಟರ್‌   

ಕೆಜಿಎಫ್‌ ಖ್ಯಾತಿಯ ನಿರ್ಮಾಪಕ ವಿಜಯ್‌ ಕಿರಗಂದೂರು ಹಾಗೂ ರೋರಿಂಗ್‌ ಸ್ಟಾರ್‌ ಶ್ರೀ ಮುರಳಿ ಜೊತೆಯಾಗಿ ಸಿನಿಮಾ ಮಾಡುತ್ತಿದ್ದಾರೆ. ಹೊಂಬಾಳೆ ಫಿಲ್ಸಂ ಸಂಸ್ಥೆ ಈ ಚಿತ್ರಕ್ಕೆ ಹಣ ಹೂಡಿಕೆ ಮಾಡುತ್ತಿದ್ದು ಇದು ಆ ಸಂಸ್ಥೆಯ 8ನೇ ಸಿನಿಮಾವಾಗಿದೆ. ಮುರಳಿ ಹುಟ್ಟುಹಬ್ಬದ ದಿನವಾದ ಇಂದು ಸಿನಿಮಾ ಶೀರ್ಷಿಕೆಯನ್ನು ಬಿಡುಗಡೆ ಮಾಡಲಾಗಿದೆ. ಈ ಚಿತ್ರಕ್ಕೆ ‘ಬಘೀರ’ ಎಂದು ಹೆಸರಿಸಲಾಗಿದೆ.

ಈ ಹಿಂದೆ ವಿಜಯ್ ಕಿರಗಂದೂರು ಹೊಸ ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ಆದರೆ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ‘ಲಕ್ಕಿ’ ಸಿನಿಮಾ ಖ್ಯಾತಿಯ ನಿರ್ದೇಶಕ ಡಾ. ಸೂರಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಕೆಜಿಎಫ್ ಖ್ಯಾತಿಯ ಪ್ರಶಾಂತ್‌ ನೀಲ್‌ ‘ಬಘೀರ’ ಶೀರ್ಷಿಕೆಯನ್ನು ಘೋಷಣೆ ಮಾಡಿದ್ದಾರೆ. ವಿಶೇಷವೆಂದರೆ ಚಿತ್ರಕ್ಕೆ ಪ್ರಶಾಂತ್ ನೀಲ್‌ ಅವರೇ ಚಿತ್ರಕಥೆ ಬರೆದಿದ್ದಾರೆ. ಮುರಳಿ ಅವರ ಹೊಸ ಚಿತ್ರದ ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣದ ಪೋಸ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ ಪ್ರಶಾಂತ್‌. ರವಿ ಬಸ್ರೂರು ಸಂಗೀತ ನಿರ್ದೇಶನ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT