ಮಾಸ್ ಲವ್ ಸ್ಟೋರಿ ಒಳಗೊಂಡ ‘ಸೂರ್ಯ’ ಚಿತ್ರ ಇತ್ತೀಚೆಗೆ ಸೆಟ್ಟೇರಿದೆ. ಸಾಗರ್ ಈ ಚಿತ್ರದ ನಿರ್ದೇಶಕರು.ಹೊಸ ಪ್ರತಿಭೆ ಪ್ರಶಾಂತ್ ಈ ಚಿತ್ರದ ನಾಯಕ. ಹರ್ಷಿತಾ ನಾಯಕಿ.
‘ಸೂರ್ಯ ನಮ್ಮ ಚಿತ್ರದ ನಾಯಕನ ಹೆಸರು. ನಾಯಕ ಹೇಗೆ ತನ್ನ ಪ್ರೀತಿಯನ್ನು ಉಳಿಸಿಕೊಳ್ಳುತ್ತಾನೆ ಎನ್ನುವುದೇ ಚಿತ್ರದ ವಸ್ತು. ಬೆಂಗಳೂರು ಸುತ್ತಮುತ್ತ ಮಾತಿನ ಭಾಗದ ಚಿತ್ರೀಕರಣ ನಡೆಸಿ ಹಾಡುಗಳಿಗೆ ಮಡಿಕೇರಿ, ಮೈಸೂರು, ಪುಣೆಗೆ ಹೋಗುವ ಯೋಜನೆಯಿದೆ. ಆರ್ಮುಗಂ ರವಿಶಂಕರ್ ತಂಡದಲ್ಲಿದ್ದಾರೆ. ಶ್ರುತಿ ಅವರು ವೈದ್ಯರ ಪಾತ್ರದಲ್ಲಿದ್ದಾರೆ. ಪ್ರಮೋದ್ ಶೆಟ್ಟಿ ಅವರು ಉತ್ತರ ಕರ್ನಾಟಕ ಭಾಗದ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ 5 ಹಾಡುಗಳಿವೆ. ಶ್ರೀಶಾಸ್ತ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಬಹದ್ದೂರ್ ಚೇತನ್, ನಾನು ಯೋಗರಾಜ ಭಟ್ ಸಾಹಿತ್ಯ ರಚಿಸಿದ್ದೇವೆ. ಮುಂದಿನ ವಾರದಿಂದ ಶೂಟಿಂಗ್ ಹೊರಡಲಿದ್ದೇವೆ’ ಎಂದರು ಸಾಗರ್.
ನಂದಿ ಸಿನಿಮಾಸ್ ಮೂಲಕ ಬಸವರಾಜ್ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಮನುರಾಜ್ ಈ ಚಿತ್ರದ ಛಾಯಾಗ್ರಾಹಕ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.