‘ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿರವಾಗಿದ್ದು, ಅವರಿಗೆ ಇಂದು ಒಂದು ಬಾರಿ ಫಿಸಿಯೋಥೆರಪಿ ಮಾಡಲಾಗಿದೆ’ ಎಂದು ಎಸ್ಪಿಬಿ ಅವರ ಪುತ್ರ ಎಸ್.ಪಿ. ಚರಣ್ ತಿಳಿಸಿದ್ದಾರೆ.
‘ಅಪ್ಪನ ಆರೋಗ್ಯ ಸಂಬಂಧ ಇಂದು ಹೊಸ ಬೆಳವಣಿಗೆಗಳು ಏನೂ ಇಲ್ಲ. ಆದರೆ, ಅವರು ಚೇತರಿಕೆಯ ಹಾದಿಯಲ್ಲಿದ್ದಾರೆ. ಎಲ್ಲಾ ಚಿತ್ರರಂಗದ ನಟ, ನಟಿಯರು, ತಂತ್ರಜ್ಞರು, ಅಭಿಮಾನಿಗಳು ಅಪ್ಪನ ಚೇತರಿಕೆಗೆ ಪ್ರಾರ್ಥಿಸುತ್ತಿರುವುದು ಖುಷಿ ತಂದಿದೆ’ ಎಂದು ಅವರು ವಿಡಿಯೊ ಸಂದೇಶದ ಮೂಲಕ ತಿಳಿಸಿದ್ದಾರೆ.
‘ಇಂದು ನಾನು ಆಸ್ಪತ್ರೆಗೆ ಭೇಟಿ ನೀಡಿಲ್ಲ. ಆದರೆ, ಚೆನ್ನೈನ ಎಂಜಿಎಂ ಹೆಲ್ತ್ಕೇರ್ನ ವೈದ್ಯರು ಅಪ್ಪನ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅಪ್ಪ ಚೇತರಿಕೆಯ ಹಾದಿಗೆ ಮರಳುತ್ತಿರುವುದು ಖುಷಿ ತಂದಿದೆ’ ಎಂದಿದ್ದಾರೆ.
ಕೋವಿಡ್–19 ಸೋಂಕು ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಎಸ್ಪಿಬಿ ಅವರನ್ನು ಎಂಜಿಎಂ ಹೆಲ್ತ್ಕೇರ್ಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಐಸಿಯುನಲ್ಲಿಯೇ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.