ಮುಂಬೈ:ಬಾಲಿವುಡ್ ಹಾಗೂಕಿರುತೆರೆ ನಟಿ ನಿಖಿತಾ ದತ್ತಾ ಅವರ ಮೊಬೈಲ್ ಫೋನ್ ಅನ್ನು ಅಪರಿಚಿತರುಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ದೂರು ನೀಡಿದ್ದಾರೆ.
ಸೋಮವಾರ ರಾತ್ರಿ ಬಾಂದ್ರಾದಲ್ಲಿ ಈ ಘಟನೆ ನಡೆದಿದೆ. ‘ರಾತ್ರಿ 7.30ರ ಸುಮಾರಿಗೆ ಬಾಂದ್ರಾ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಹಿಂದಿನಿಂದ ಬೈಕ್ನಲ್ಲಿ ಬಂದ ಅಪರಿಚಿತರು ನನ್ನ ತಲೆಗೆ ಹೊಡೆದರು. ಬಳಿಕಎರಡು–ಮೂರು ಸೆಕೆಂಡ್ಗಳಲ್ಲಿ ಕೈಯಲ್ಲಿ ಇದ್ದ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡು ಪರಾರಿಯಾದರು’ ಎಂದು ದೂರಿದ್ದಾರೆ.
ಈ ಸಮಯದಲ್ಲಿ ಸ್ಥಳೀಯರು ಸೇರಿದಂತೆ ಸ್ವೀಟ್ ಅಂಗಡಿ ಮಾಲೀಕರು ಸಹಾಯಕ್ಕೆ ಬಂದರೂ ಯಾವುದೇ ಪ್ರಯೋಜನವಾಗಲಿಲ್ಲ. ಅವರು ವೇಗವಾಗಿ ಬೈಕ್ನಲ್ಲಿ ಪರಾರಿಯಾದರು ಎಂದು ನಿಖಿತಾ ಹೇಳಿದ್ದಾರೆ.
ಮೊಬೈಲ್ ಕದ್ದ ಸಂಬಂಧ ನಿಖಿತಾ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಪ್ರಕರಣದ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ನಿಖಿತಾ ಅವರು ಫೋನ್ ಕಳುವಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಅಭಿಮಾನಿಗಳು ಸೇರಿದಂತೆ ಆಪ್ತರು ಹಾಗೂ ಗೆಳೆಯರು ಅವರಿಗೆ ಸಮಾಧಾನ ಹೇಳಿದ್ದಾರೆ.
ನಿಖಿತಾ ಅವರು ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ. ಕಬೀರ್ ಸಿಂಗ್ ಸಿನಿಮಾ ಹಾಗೂ ಬಿಗ್ಬುಲ್ ಸಿರೀಸ್ ಅವರಿಗೆ ಹೆಚ್ಚು ಖ್ಯಾತಿ ತಂದುಕೊಟ್ಟಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.