ಕಿಚ್ಚ ಸುದೀಪ್ ಅವರ ಅಭಿನಯದ 'ವಿಕ್ರಾಂತ್ ರೋಣ' ಚಿತ್ರ ಬಿಡುಗಡೆಗೆ ಸಿದ್ಧವಾಗಿರುವ ಬೆನ್ನಲ್ಲೇಸುದೀಪ್ ಹೊಸ ಸಿನಿಮಾಘೋಷಣೆಯಾಗಿದೆ.
ಅಭಿಮಾನಿಗಳಿಗೆ ಸುದೀಪ್ ಮುಂದೆ ಯಾವ ಸಿನಿಮಾ ಮಾಡಲಿದ್ದಾರೆ ಎಂಬ ಕುತೂಹಲವಿತ್ತು. ಈಗ ಸಿನಿಮಾ ಪ್ರೇಮಿಗಳಿಗೆ ಉತ್ತರ ಸಿಕ್ಕಿದ್ದು, ತಮಿಳು ನಿರ್ದೇಶಕ ವೆಂಕಟ್ ಪ್ರಭು ಅವರು ಕಿಚ್ಚನಿಗೆ ಆ್ಯಕ್ಷನ್–ಕಟ್ ಹೇಳಲಿದ್ದಾರೆ.
ಕೋಟಿಗೊಬ್ಬ3 ಸಿನಿಮಾದ ಯಶಸ್ಸಿನ ಬಳಿಕ, ವಿಕ್ರಾಂತ್ ರೋಣ ಚಿತ್ರ ಕೂಡ ಬಿಡುಗಡೆಗೆ ಸಿದ್ದವಾಗಿದ್ದು ಈ ನಡುವೆ ಹೊಸ ಸಿನಿಮಾ ಘೋಷಣೆ ಮಾಡಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.
ಕೆಲವು ದಿನಗಳ ಹಿಂದೆ ವೆಂಕಟ್ ಪ್ರಭು ಅವರು ಬೆಂಗಳೂರಿಗೆ ಬಂದು ಸುದೀಪ್ ಅವರನ್ನು ಭೇಟಿ ಮಾಡಿ ಕತೆ ಹೇಳಿದ್ದರು. ವೆಂಕಟ್ ಪ್ರಭು ಅವರ ಕತೆ ಸುದೀಪ್ಗೆ ಇಷ್ಟವಾಗಿದ್ದು ಸಿನಿಮಾ ಮಾಡಲು ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ಅವರೇ ಸಂದರ್ಶನದಲ್ಲಿ ಹೇಳಿದ್ದಾರೆ.
ಈ ಚಿತ್ರ ದೊಡ್ಡಮಟ್ಟದಲ್ಲಿ ನಿರ್ಮಾಣವಾಗುತ್ತಿದ್ದು ಕನ್ನಡ, ತಮಿಳು, ತೆಲುಗು ಭಾಷೆಯಲ್ಲಿ ತೆರೆಗೆ ಬರಲಿದೆ. ಆದಾಗ್ಯೂ ಸಿನಿಮಾ ನಿರ್ಮಾಪಕರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ವೆಂಕಟ್ ಪ್ರಭು ತಮಿಳಿನಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಅವರು ಇತ್ತೀಚೆಗೆ ನಿರ್ದೇಶನ ಮಾಡಿದ್ದ 'ಮಾನಾಡು' ಚಿತ್ರ ಹಿಟ್ ಆಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.