ಟಾಲಿವುಡ್ ನಿರ್ದೇಶಕ ಕೊರಟಾಲ ಶಿವ ಮತ್ತು ನಟ ಅಲ್ಲು ಅರ್ಜುನ್ ಕಾಂಬಿನೇಷನ್ನಡಿ ಹೊಸ ಸಿನಿಮಾ ಘೋಷಣೆಯಾಗಿದೆ. ಇದರ ಟೈಟಲ್ ಇನ್ನೂ ಅಧಿಕೃತಗೊಂಡಿಲ್ಲ.
ಪ್ರಸ್ತುತ ಅಲ್ಲು ಅರ್ಜುನ್ ‘ರಂಗಸ್ಥಳಂ’ ಚಿತ್ರದ ಖ್ಯಾತಿಯ ಸುಕುಮಾರ್ ನಿರ್ದೇಶನದ ‘ಪುಷ್ಪ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದರಲ್ಲಿ ಅವರಿಗೆ ಕನ್ನಡತಿ ರಶ್ಮಿಕಾ ಮಂದಣ್ಣ ಜೋಡಿ. ಈ ಸಿನಿಮಾ ಪೂರ್ಣಗೊಂಡ ಬಳಿಕ ಹೊಸ ಸಿನಿಮಾ ಸೆಟ್ಟೇರಲಿದೆಯಂತೆ.
ಜಿಎ2 ಪಿಕ್ಚರ್ ಮತ್ತು ಯುವಸುಧಾ ಆರ್ಟ್ಸ್ ಬ್ಯಾನರ್ಸ್ನಡಿ ನಿರ್ಮಾಣವಾಗಲಿರುವ ಈ ಸಿನಿಮಾದ ಶೂಟಿಂಗ್ 2021ರಿಂದ ಶುರುವಾಗಲಿದೆ. 2022ರ ಸಂಕ್ರಾಂತಿಗೆ ಚಿತ್ರ ಬಿಡುಗಡೆಗೆ ನಿರ್ಧರಿಸಲಾಗಿದೆ. ಬಂಟಿ ನಟನೆಯ ಇದು 21ನೇ ಚಿತ್ರ. ಪ್ಯಾನ್ ಇಂಡಿಯಾ ಕಾನ್ಸೆಪ್ಟ್ನಡಿ ಸಿನಿಮಾ ನಿರ್ಮಾಣವಾಗಲಿದೆ.
ಈ ಹೊಸ ಚಿತ್ರದ ಪೋಸ್ಟರ್ ವಿಭಿನ್ನವಾಗಿದೆ. ಕೊರಟಾಲ ಶಿವ ಮತ್ತು ಅಲ್ಲು ಅರ್ಜುನ್ ಅವರು ಗ್ರಾಮವೊಂದರ ಮುಂದೆ ನಿಂತಿದ್ದಾರೆ. ಅವರು ನದಿ ದಂಡೆಯ ಮೇಲೆ ನಿಂತು ವೀಕ್ಷಿಸುತ್ತಿದ್ದಾರೆ. ಅವರ ಪಕ್ಕದಲ್ಲಿ ದೋಣಿಯೊಂದು ಇದೆ. ಈ ಭಯಾನಕವಾದ ಪೋಸ್ಟರ್ ಚಿತ್ರದ ಕಥೆಯ ಮೇಲೆ ನಿರೀಕ್ಷೆ ಹೆಚ್ಚಿಸಿದೆ.
‘ಕೊರಟಾಲ ಶಿವ ಅವರೊಟ್ಟಿಗೆ ನನ್ನ ಹೊಸ ಸಿನಿಮಾ #AA21 ಅನ್ನು ಅನೌನ್ಸ್ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ’ ಎಂದು ಅಲ್ಲು ಅರ್ಜುನ್ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.