ADVERTISEMENT

ಸಿನಿಮಾ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ನಿಧನ

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 4:22 IST
Last Updated 14 ಜೂನ್ 2021, 4:22 IST
ಕೆ.ಸಿ.ಎನ್ ಚಂದ್ರಶೇಖರ್
ಕೆ.ಸಿ.ಎನ್ ಚಂದ್ರಶೇಖರ್   

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ಸೋಮವಾರ ನಿಧನರಾದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮೂರು ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ತಂದೆ ಕೆ.ಸಿ.ಎನ್.ಗೌಡರ ಮಾರ್ಗದರ್ಶನದಲ್ಲಿ ಚಲನಚಿತ್ರ ನಿರ್ಮಾಣ, ಪ್ರದರ್ಶನ, ಚಿತ್ರ ವಿತರಣೆಯಲ್ಲಿ ಅಪಾರ ಅನುಭವಗಳಿಸಿದ್ದರು. ಬೆಂಗಳೂರಿನ ನವರಂಗ್, ಊರ್ವಶಿ ಮತ್ತು ದೊಡ್ಡಬಳ್ಳಾಪುರದ ರಾಜ್ ಕಮಲ್ ಚಿತ್ರಮಂದಿರದ ಮಾಲೀಕರಾಗಿದ್ದರು.

ADVERTISEMENT

ಐವತ್ತಕ್ಕೂ ಹೆಚ್ಚು ಚಿತ್ರ ನಿರ್ಮಾಣ ಮಾಡಿದ್ದ ಇವರು ಸೆನ್ಸಾರ್ ಮಂಡಳಿ ಸದಸ್ಯರಾಗಿ ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ದಾರಿ ತಪ್ಪಿದ ಮಗ, ಹುಲಿಯ ಹಾಲಿನ ಮೇವು, ಬಬ್ರುವಾಹನ ಮತ್ತಿತರ ಚಿತ್ರಗಳನ್ನು ನಿರ್ಮಿಸಿದ್ದರು. ಸುಮಾರು 500 ಚಿತ್ರಗಳ ವಿತರಣೆ ಮಾಡಿದ್ದರು.

ಪನೋರಮಾ ವಿಭಾಗ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಿತಿ ಹಾಗೂ ರಾಜ್ಯ ಚಲನಚಿತ್ರ ಪ್ರಶಸ್ತಿ ಸಮಿತಿ ತೀರ್ಪುಗಾರಾಗಿ, ಮುಂಬೈನ ಭಾರತೀಯ ಚಲನಚಿತ್ರ ಒಕ್ಕೂಟದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಡಾ.ರಾಜ್ ಕುಮಾರ್ ಆಪ್ತ ವಲಯದಲ್ಲಿ ಇದ್ದ ಚಂದ್ರಶೇಖರ್, ಶೇಷಾದ್ರಿಪುರದ ಶಿಕ್ಷಣ ದತ್ತಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತ ಸುಮಾರು ನೂರವೈತ್ತು ವಿದ್ಯಾರ್ಥಿಗಳಿಗೆ ಆಶ್ರಯವಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.