ಬೆಂಗಳೂರು: ಏರೋ ಇಂಡಿಯಾ ಏರ್ ಶೊ ಉದ್ಘಾಟನೆಗೆ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಟರಾದ ಯಶ್, ರಿಷಭ್ ಶೆಟ್ಟಿ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್, ನಿರ್ಮಾಪಕ ವಿಜಯ್ ಕಿರಂಗದೂರು ಹಾಗೂ ಡಿಜಿಟಲ್ ಕ್ರಿಯೇಟರ್ ಶ್ರದ್ಧಾ ಜೈನ್ ಭೇಟಿಯಾದರು.
ಭಾನುವಾರ ರಾತ್ರಿ ರಾಜಭವನದಲ್ಲಿ ಮೋದಿ ಅವರು ತಂಗಿದ್ದ ವೇಳೆ ಪ್ರಧಾನಿ ಕಚೇರಿ ಅಧಿಕಾರಿಗಳು ಈ ಭೇಟಿಗೆ ವ್ಯವಸ್ಥೆ ಮಾಡಿದ್ದರು.
ಮೋದಿ ಜೊತೆಗಿನ ಔತಣಕೂಟದಲ್ಲಿ ಯಶ್, ರಿಷಭ್ ಶೆಟ್ಟಿ ಭಾಗಿಯಾಗಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ, ಔತಣಕೂಟದಲ್ಲಿ ಪಾಲ್ಗೊಂಡಿರುವ ಬಗ್ಗೆ ಇದುವರೆಗೆ ಖಚಿತತೆ ಇಲ್ಲ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, 'ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಕರ್ನಾಟಕ ಚಿತ್ರರಂಗದ ಪ್ರಮುಖರನ್ನು ಭೇಟಿಯಾದರು. ಸಂಸ್ಕೃತಿ, ನವ ಭಾರತ ಮತ್ತು ಕರ್ನಾಟಕದ ಪ್ರಗತಿಗೆ ಅವರು ನೀಡಬಹುದಾದ ಕೊಡುಗೆಗಳ ಕುರಿತು ಚರ್ಚಿಸಿದರು' ಎಂದು ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.