ADVERTISEMENT

ಒಳ್ಳೆಯ ಫಲಿತಾಂಶ ಕೊಡುವ ಕಾಲ ಕನ್ನಡಕ್ಕೆ ಬಂದಿದೆ: ಯೋಗರಾಜ್ ಭಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ನವೆಂಬರ್ 2021, 8:57 IST
Last Updated 28 ನವೆಂಬರ್ 2021, 8:57 IST
ರಾಜ್ ಬಿ. ಶೆಟ್ಟಿ ಅವರ ನೂತನ ಚಿತ್ರ ‘ಗರುಡ ಗಮನ ವೃಷಭ ಗಮನ’
ರಾಜ್ ಬಿ. ಶೆಟ್ಟಿ ಅವರ ನೂತನ ಚಿತ್ರ ‘ಗರುಡ ಗಮನ ವೃಷಭ ಗಮನ’   

ಬೆಂಗಳೂರು: ಒಂದು ಮೊಟ್ಟೆಯ ಕಥೆ ಚಿತ್ರದ ಮೂಲಕ ಕನ್ನಡ ಸಿನಿಮಾ ಕ್ಷೇತ್ರದಲ್ಲಿ ವಿಶೇಷ ಛಾಪು ಮೂಡಿಸಿದ್ದ ರಾಜ್ ಬಿ. ಶೆಟ್ಟಿ ಅವರ ನೂತನ ಚಿತ್ರ ‘ಗರುಡ ಗಮನ ವೃಷಭ ಗಮನ’ಕ್ಕೆ ಪ್ರಶಂಸೆಗಳು ಹರಿದು ಬರುತ್ತಿದೆ.

ನಿರ್ದೇಶಕ ಯೋಗರಾಜ್ ಭಟ್ ಅವರು ಕೂಡ ಗರುಡ ಗಮನ ವೃಷಭ ವಾಹನ ಚಿತ್ರವನ್ನು ನೋಡಿದ್ದಾರೆ.

ಚಿತ್ರ ನೋಡಿ ಮೆಚ್ಚಿಕೊಂಡಿರುವ ಭಟ್, ಗರುಡ ಗಮನ ವೃಷಭ ವಾಹನ ನೋಡಿದೆ. ಒಳ್ಳೆ ಪ್ರಯೋಗಗಳು ಒಳ್ಳೆಯ ಫಲಿತಾಂಶ ಕೊಡುವ ಕಾಲ ಕನ್ನಡಕ್ಕೆ ಬಂದಂತಿದೆ. ನಿರ್ದೇಶಕ ಮಿತ್ರ ರಾಜ್ ಶೆಟ್ಟಿಗೆ ಅಭಿನಂದನೆ, ಶುಭವಾಗಲಿ ಎಂದು ಹಾರೈಸಿ, ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರೆ.

ADVERTISEMENT

ಗರುಡ ಗಮನ ವೃಷಭ ವಾಹನ ಚಿತ್ರವನ್ನು ರಾಜ್‌ ಬಿ. ಶೆಟ್ಟಿ ನಿರ್ದೇಶನ ಮಾಡಿದ್ದಾರೆ.

ಮಿಧುನ್‌ ಮುಕುಂದನ್‌ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರವನ್ನು ಪರಂವಃ ಪಿಕ್ಚರ್ಸ್‌ ನಿರ್ಮಾಣ ಮಾಡಿದ್ದು, ರಾಜ್‌ ಬಿ. ಶೆಟ್ಟಿ, ರಿಷಬ್‌ ಶೆಟ್ಟಿ, ಗೋಪಾಲಕೃಷ್ಣ ದೇಶಪಾಂಡೆ, ದೀಪಕ್‌ ರೈ ಪಾಣಾಜೆ ಮುಂತಾದವರ ತಾರಾಗಣವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.