ADVERTISEMENT

ರಣಬೀರ್–ಆಲಿಯಾ ಉಜ್ಜೈನಿ ಮಹಾಕಾಲೇಶ್ವರ ದೇಗುಲ ಪ್ರವೇಶಿಸದಂತೆ ಬಜರಂಗದಳ ತಡೆ

ಗೋಮಾಂಸ ಇಷ್ಟವೆಂದಿದ್ದ ರಣಬೀರ್‌: ಅಲಿಯಾ ಜೊತೆ ಉಜ್ಜೈನಿ ದೇಗುಲ ಪ್ರವೇಶಕ್ಕೆ ತಡೆ

ಪಿಟಿಐ
Published 7 ಸೆಪ್ಟೆಂಬರ್ 2022, 6:37 IST
Last Updated 7 ಸೆಪ್ಟೆಂಬರ್ 2022, 6:37 IST
ಬಾಲಿವುಡ್‌ನ ತಾರಾ ದಂಪತಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್‌
ಬಾಲಿವುಡ್‌ನ ತಾರಾ ದಂಪತಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್‌   

ಉಜ್ಜೈನಿ: ಬಾಲಿವುಡ್‌ನ ತಾರಾ ದಂಪತಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್‌ಗೆ ಮಧ್ಯ ಪ್ರದೇಶದಲ್ಲಿ ದೇಗುಲ ಪ್ರವೇಶ ನಿರಾಕರಿಸಲಾಗಿದೆ.

ಮಧ್ಯ ಪ್ರದೇಶದ ಉಜ್ಜೈನಿಯಲ್ಲಿರುವ ಪ್ರಸಿದ್ಧ ಮಹಾಕಾಲ್ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಲು ರಣಬೀರ್ ಕಪೂರ್ ಮತ್ತು ಆಲಿಯಾ ಭಟ್‌ ನಿರ್ಧರಿಸಿದ್ದರು.

ಆದರೆ, ಬಜರಂಗ ದಳ ಕಾರ್ಯಕರ್ತರು ಈ ಜೋಡಿಗೆ ದೇಗುಲ ಪ್ರವೇಶ ನಿರಾಕರಿಸಿದ್ದಾರೆ. ಅಲ್ಲದೆ, ರಣಬೀರ್ ಮತ್ತು ಆಲಿಯಾ ಸ್ಥಳಕ್ಕೆ ಬರುತ್ತಿದ್ದಂತೆ ‘ಜೈ ಶ್ರೀರಾಮ್‘ ಘೋಷಣೆ ಕೂಗಿದ್ದಾರೆ.

ADVERTISEMENT

ರಣಬೀರ್ ಅವರು ಕೆಲಸಮಯದ ಹಿಂದೆ, ಸಂದರ್ಶನವೊಂದರಲ್ಲಿ ಗೋಮಾಂಸ ತಿನ್ನಲು ಇಷ್ಟ ಎಂದು ಹೇಳಿಕೊಂಡಿದ್ದರು. ಹಿಂದುಗಳ ಭಾವನೆಗೆ ಅವರು ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ದೇಗುಲ ಪ್ರವೇಶ ನಿರಾಕರಿಸಿದ್ದಾರೆ.

ಬಜರಂಗದಳದವರ ವಿರುದ್ಧ ಲಾಠಿ ಚಾರ್ಜ್ ಮಾಡಿದರೂ, ಕಾರ್ಯಕರ್ತರು ಸ್ಥಳದಿಂದ ತೆರಳದೇ ಪ್ರತಿಭಟಿಸಿದ್ದಾರೆ. ಹೀಗಾಗಿ ರಣಬೀರ್ ಮತ್ತು ಆಲಿಯಾಗೆ ದೇಗುಲ ಪ್ರವೇಶ ಸಾಧ್ಯವಾಗಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.