
ಕಿಚ್ಚ ಸುದೀಪ್
ಚಿತ್ರ: ಇನ್ಸ್ಟಾಗ್ರಾಮ್
ಬಿಗ್ಬಾಸ್ ಮನೆಯಿಂದ ಓರ್ವ ಸ್ಪರ್ಧಿ ಆಚೆ ಬರಲಿದ್ದಾರೆ. ಅದು ಯಾರೆಂದು ಭಾನುವಾರದ ಸಂಚಿಕೆಯಲ್ಲಿ ತಿಳಿದು ಬರಲಿದೆ. ಈ ನಡುವೆ ಇಡೀ ವಾರದಲ್ಲಿ ಏನೆಲ್ಲಾ ಆಯ್ತು? ತಪ್ಪು ಮಾತಾಡಿದ್ದು ಯಾರು? ಕಿಚ್ಚನ ಚಪ್ಪಾಳೆ ಯಾರಿಗೆ ಎಂದು ಸುದೀಪ್ ಇಂದಿನ ಸಂಚಿಕೆಯಲ್ಲಿ ತಿಳಿಸಲಿದ್ದಾರೆ.
ಕಲರ್ಸ್ ಕನ್ನಡ ಸಾಮಾಜಿಕ ಮಾಧ್ಯಮದಲ್ಲಿ ಪ್ರೊಮ್ರೋ ಒಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕಿಚ್ಚ ಸುದೀಪ್, ವಾರದ ಪಂಚಾಯಿತಿ ನಡೆಸಲು ವೇದಿಕೆಗೆ ಎಂಟ್ರಿ ಕೊಟ್ಟಿದ್ದಾರೆ. ಪ್ರೊಮ್ರೋದಲ್ಲಿ ವೇದಿಕೆಗೆ ಬಂದ ಕಿಚ್ಚ ಸುದೀಪ್, ‘ತಾಳ್ಮೆ ನಮಗೆ ಕಲಿಸುವುದು ಪಾಠ ಒಂದು ಕಡೆಯಾದರೆ, ಬದುಕು ದಿನನಿತ್ಯ ಕಲಿಸುವ ಪಾಠಗಳೇ ಬೇರೆ ತರ ಆಗಿರುತ್ತವೆ’ ಎಂದಿದ್ದಾರೆ.
‘ಬಿಗ್ಬಾಸ್ನಲ್ಲಿ ಪರೀಕ್ಷೆ ಎಲ್ಲರಿಗೂ ಒಂದೆ. ಆದರೇ, ಪಠ್ಯಕ್ರಮ ಎಲ್ಲ ವ್ಯಕ್ತಿತ್ವಗಳಿಗೆ ಸರಿಯಾಗಿ ಬದಲಾಗುತ್ತಾ ಹೋಗುತ್ತದೆ. ವ್ಯಕ್ತಿತ್ವದ ಪರೀಕ್ಷೆಯಲ್ಲಿ ಪಾಸ್ ಆದೋರು ಯಾರು? ಪಾಸ್ ಯಾರು ಆಗೋದಿಲ್ಲ’ ಎಂದು ಹೇಳಿದ್ದಾರೆ.
ಈ ವಾರ ನಾಮಿನೇಟ್ ಆದ ಸ್ಪರ್ಧಿಗಳು ಯಾರು?
ಈ ವಾರ ಅಶ್ವಿನಿ ಗೌಡ, ರಕ್ಷಿತಾ, ಗಿಲ್ಲಿ ನಟ, ಧನುಷ್, ಕಾಕ್ರೋಚ್ ಸುಧಿ, ಸ್ಪಂದನಾ, ಧ್ರುವಂತ್, ಸೂರಜ್, ಚಂದ್ರಪ್ರಭ ಹಾಗೂ ರಾಶಿಕಾ ಬಿಗ್ಬಾಸ್ ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿದ್ದಾರೆ.
ನಾಮಿನೇಷನ್ನಿಂದ ಬಚಾವ್ ಆಗಿದ್ದು ಯಾರು?
ಜಾಹ್ನವಿ, ಕಾವ್ಯ, ರಿಷಾ, ರಘು, ಅಭಿಷೇಕ್, ಮಾಳು ಈ ಆರು ಮಂದಿ ನಾಮಿನೇಷನ್ನಿಂದ ಬಚಾವ್ ಆಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.