ಬೆಂಗಳೂರು: ಪೆಡ್ಲರ್ ಜೊತೆ ಸಂಪರ್ಕವಿಟ್ಟುಕೊಂಡು ಡ್ರಗ್ಸ್ ಖರೀದಿಸುತ್ತಿದ್ದ ಆರೋಪದಡಿ ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಟ್ ಅವರನ್ನು ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇಬ್ಬರು ಪೆಡ್ಲರ್ಗಳನ್ನು ಇತ್ತೀಚೆಗಷ್ಟೇ ಬಂಧಿಸಿದ್ದ ಐಎಸ್ಡಿ ಪೊಲೀಸರು, ಅವರ ಹೇಳಿಕೆ ಆಧರಿಸಿ ನಟ ಯೋಗೀಶ್ ಹಾಗೂ ಕ್ರಿಕೆಟಿಗ ಎನ್.ಸಿ.ಅಯ್ಯಪ್ಪ ಅವರನ್ನು ಈಗಾಗಲೇ ವಿಚಾರಣೆ ಮಾಡಿದ್ದಾರೆ.
ಅಭಿಷೇಕ್ ಹಾಗೂ ಗೀತಾ ಭಟ್ ಅವರಿಗೂ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದರು. ಅದರನ್ವಯ ಇಬ್ಬರೂ ಶಾಂತಿನಗರದಲ್ಲಿರುವ ಐಎಸ್ಡಿ ಕಚೇರಿಗೆ ವಿಚಾರಣೆಗಾಗಿ ಬಂದಿದ್ದಾರೆ. ಎಸ್ಪಿ ನೇತೃತ್ವದ ತಂಡ, ಅವರಿಬ್ಬರಿಂದ ಹೇಳಿಕೆ ಪಡೆಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.