ಹೊಸ ಹೊಸ ಧಾರಾವಾಹಿಗಳ ಮೂಲಕ ಜನರನ್ನು ರಂಜಿಸುತ್ತಿರುವ ಉದಯ ವಾಹಿನಿ ಈಗ ‘ಮದುಮಗಳು’ ಎಂಬ ಮತ್ತೊಂದು ಹೊಸ ಧಾರಾವಾಹಿಯನ್ನು ಪ್ರಸಾರ ಮಾಡುತ್ತಿದೆ. ಈಗಾಗಲೇ ಕಾವ್ಯಾಂಜಲಿ ಧಾರಾವಾಹಿಯ ಮೂಲಕ ಕನ್ನಡಿಗರ ಮನ ಗೆದ್ದಿರುವ ತಂಡ ಈಗ ಮತ್ತೊಂದು ಹೊಸ ಪ್ರಯತ್ನಕ್ಕೆ ಕೈಹಾಕಿದೆ.
ಈ ಧಾರಾವಾಹಿಯಲ್ಲಿ ಕಿರುತೆರೆಯ ಖ್ಯಾತ ನಟಿ ಸಿರಿಜಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಧಾರಾವಾಹಿಯಲ್ಲಿ ಭವಿಷ್ ನಾಯಕನಟ ಹಾಗೂ ರಕ್ಷಿತಾ ನಾಯಕಿಯಾಗಿ ನಟಿಸುತ್ತಿದ್ದಾರೆ. ವೀಣಾ ಸುಂದರ್, ರೇಖಾ ರಾವ್ ಸೇರಿದಂತೆ ಹಲವು ಕಿರುತೆರೆ ಖ್ಯಾತ ನಟಿ–ನಟಿಯರು ಧಾರಾವಾಹಿಯಲ್ಲಿ ಬಣ್ಣ ಹಚ್ಚುತ್ತಿದ್ದಾರೆ.
ಈ ಧಾರಾವಾಹಿಗೆ ಆದರ್ಶ ಹೆಗ್ಡೆ ನಿರ್ದೇಶನವಿದೆ. ಛಾಯಾಗ್ರಾಹಕರಾಗಿ ರುದ್ರಮುನಿ ಬೆಳೆಗೆರೆ, ಸಹ-ಛಾಯಾಗ್ರಾಹಕ ಬಾಲಾಜಿ ರಾವ್ ಧಾರಾವಾಹಿಯನ್ನು ಸೆರೆ ಹಿಡಿಯುತ್ತಿದ್ದಾರೆ. ಶಾಕ್ ಸ್ಟುಡಿಯೋಸ್ ಮುಖ್ಯಸ್ಥ ಶಂಕರ್ ವೆಂಕಟರಮಣ್ ‘ಮದುಮಗಳ’ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಈ ಧಾರಾವಾಹಿ ಮಾರ್ಚ್ 7ರಿಂದ ಪ್ರತಿ ಸೋಮವಾರದಿಂದ ಶನಿವಾರದವರೆಗೆ ಸಂಜೆ 6ಕ್ಕೆ ಪ್ರಸಾರವಾಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.