ಕೊಲ್ಹಾಪುರ: ಬೈಕ್ಗೆಕಾಂಕ್ರಿಟ್ ಮಿಕ್ಸರ್ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ನಟಿ ಕಲ್ಯಾಣಿ ಕುರಾಲೆ ಜಾವೇದ್(32) ಅವರು ಸಾವನ್ನಪ್ಪಿರುವ ಘಟನೆ ಕೊಲ್ಹಾಪುರ ಜಿಲ್ಲೆಯಲ್ಲಿ ನಡೆದಿದೆ ಎಂದುಪೊಲೀಸ್ ಅಧಿಕಾರಿಯೊಬ್ಬರುಭಾನುವಾರ ತಿಳಿಸಿದ್ದಾರೆ.
‘ತುಜ್ಯತ್ ಜೀವ್ ರಂಗಲಾ’ ಮರಾಠಿ ಧಾರವಾಹಿಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಲ್ಯಾಣಿ ಅವರು ಶನಿವಾರ ಮನೆಗೆ ಬೈಕ್ನಲ್ಲಿ ತೆರಳುವಾಗ ಸಾಂಗ್ಲಿ– ಕೊಲ್ಹಾಪುರ ಹೆದ್ದಾರಿಯ ಹಾಲೊಂಡಿ ಬಳಿ ಈ ಘಟನೆ ಸಂಭವಿಸಿದೆ. ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಟ್ರ್ಯಾಕ್ಟರ್ ಚಾಲಕನ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತುಮೋಟಾರು ವಾಹನಗಳ ಕಾಯ್ದೆ ನಿಬಂಧನೆಗಳ ಅಡಿಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.