ADVERTISEMENT

ಧಾರಾವಾಹಿ ಚಿತ್ರೀಕರಣಕ್ಕೆ ಅನುಮತಿ– ಸಚಿವ ಆರ್. ಅಶೋಕ

​ಪ್ರಜಾವಾಣಿ ವಾರ್ತೆ
Published 5 ಮೇ 2020, 11:38 IST
Last Updated 5 ಮೇ 2020, 11:38 IST
ಆರ್‌. ಅಶೋಕ
ಆರ್‌. ಅಶೋಕ   

ಬೆಂಗಳೂರು: ಲಾಕ್‌ಡೌನ್‌ ಪರಿಣಾಮದಿಂದ ನಿಂತು ಹೋಗಿದ್ದ ಧಾರಾವಾಹಿ ಶೂಟಿಂಗ್‌ಗೆ ಚಾಲನೆ ಸಿಕ್ಕಿದ್ದು ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಮಂಗಳವಾರ ಅನುಮತಿ ನೀಡಿದೆ.

ಈ ವಿಷಯ ತಿಳಿಸಿದ ಕಂದಾಯ ಸಚಿವ ಆರ್‌. ಅಶೋಕ, ‘ಆರು ಸಾವಿರಕ್ಕೂ ಹೆಚ್ಚು ಕಾರ್ಮಿಕರು ಧಾರಾವಾಹಿಗಳನ್ನು ಅವಲಂಬಿಸಿದ್ದಾರೆ. ಮನೆಯ ಒಳಗಡೆ ನಡೆಯುವ ಚಿತ್ರೀಕರಣಕ್ಕೆ ಮಾತ್ರ ಅನುಮತಿ ನೀಡಲಾಗಿದೆ’ ಎಂದರು.

‘ಕೊರೊನಾ ಹಿನ್ನೆಲೆಯಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಚಿತ್ರೀಕರಣ ನಡೆಸುವಂತೆ ಸೂಚನೆ ನೀಡಲಾಗಿದೆ. ಆದರೆ, ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ಇಲ್ಲ’ ಎಂದೂ ಅವರು ಸ್ಪಷ್ಟಪಡಿಸಿದರು.

ADVERTISEMENT

ಆದರೆ, ಸಿನಿಮಾ ಮತ್ತು ರಿಯಾಲಿಟಿ ಷೋಗಳ ಚಿತ್ರೀಕರಣಕ್ಕೆ ಯಾವುದೇಅವಕಾಶ ನೀಡಲಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.