ADVERTISEMENT

ಚೇತರಿಸಿಕೊಂಡ ನಟ ಸುದೀಪ್‌: ಮತ್ತೆ ಬಿಗ್‌ಬಾಸ್‌ ನಡೆಸಲು ಸಜ್ಜು

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2021, 6:53 IST
Last Updated 29 ಏಪ್ರಿಲ್ 2021, 6:53 IST
ಸುದೀಪ್‌
ಸುದೀಪ್‌   

ಬೆಂಗಳೂರು: ಕಳೆದೆರಡು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಸುದೀಪ್‌ ಚೇತರಿಸಿಕೊಂಡಿದ್ದು, ಈ ವಾರಾಂತ್ಯದ ಬಿಗ್‌ಬಾಸ್‌ ಸಂಚಿಕೆಗಳಲ್ಲಿ ಭಾಗವಹಿಸಲಿದ್ದಾರೆ.

‘ನಿಮ್ಮ ಪ್ರಾರ್ಥನೆಗೆ ಧನ್ಯವಾದ. ನಾಗೀಗ ಚೇತರಿಸಿಕೊಂಡಿದ್ದು, ಈ ವಾರಾಂತ್ಯದ ಬಿಗ್‌ಬಾಸ್‌ ಸಂಚಿಕೆಯಲ್ಲಿ ಭಾಗವಹಿಸಲು ಎದುರುನೋಡುತ್ತಿದ್ದೇನೆ. ನನ್ನ ಆರೋಗ್ಯದ ಮೇಲೆ ನಿಗಾ ಇರಿಸಿದ ವೈದ್ಯರಾದ ವೆಂಕಟೇಶ್‌ ಹಾಗೂ ವಿನಯ್‌ ಅವರಿಗೆ ಧನ್ಯವಾದ’ ಎಂದು ಸುದೀಪ್‌ ಟ್ವೀಟ್‌ ಮಾಡಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ನಟ ಸುದೀಪ್‌, ಕಳೆದೆರಡು ವಾರದ ಬಿಗ್‌ಬಾಸ್‌ ‘ವಾರದ ಕಥೆ ಕಿಚ್ಚನ ಜೊತೆ’ ಹಾಗೂ ‘ಸೂಪರ್‌ ಸಂಡೇ ವಿದ್‌ ಸುದೀಪ್‌’ನಲ್ಲಿ ಭಾಗವಹಿಸಿರಲಿಲ್ಲ. ಸುದೀಪ್‌ ಅನುಪಸ್ಥಿತಿಯಲ್ಲಿ ನಡೆದ ಸಂಚಿಕೆಯಲ್ಲಿ, ಮನೆಯಿಂದ ಹೊರಹೋಗಲು ನಾಮಿನೇಟ್‌ ಆಗಿದ್ದ ಸ್ಪರ್ಧಿಗಳನ್ನು ಹಲವು ಆಟದ ಮುಖಾಂತರ ಸೇಫ್‌ ಮಾಡಲಾಗಿತ್ತು. ಕಳೆದ ಎಂಟು ಆವೃತ್ತಿಗಳಲ್ಲಿ ಹೀಗಾಗಿದ್ದು ಇದೇ ಮೊದಲಾಗಿತ್ತು. ಮನೆಯೊಳಗಿದ್ದ ಸ್ಪರ್ಧಿಗಳೂ, ಸುದೀಪ್‌ ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪತ್ರದ ಮುಖೇನ ಕೋರಿದ್ದರು. ಸುದೀಪ್‌ ಅಭಿಮಾನಿಗಳೂ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಟ್ವಿಟರ್‌, ಇನ್‌ಸ್ಟಾಗ್ರಾಂನಲ್ಲಿ ಸಂದೇಶಗಳನ್ನು ಕಳುಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.