ಬೆಂಗಳೂರು: ಜೀ ಕನ್ನಡ ವಾಹಿನಿಯು ನಾಯಂಡಹಳ್ಳಿ ಬಳಿಯ ನಂದಿ ಲಿಂಕ್ ಮೈದಾನದಲ್ಲಿ ಅದ್ದೂರಿಯಾಗಿ ‘ಜೀ ಕುಟುಂಬ ಅವಾರ್ಡ್ಸ್ 2020’ ಕಾರ್ಯಕ್ರಮವನ್ನು ನಡೆಸಿ, ಕಿರುತೆರೆ ಕಲಾವಿದರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿತು.
‘ಜೀ ಕುಟುಂಬ ಅವಾರ್ಡ್ಸ್’ನಲ್ಲಿ ಒಟ್ಟು 44 ಪ್ರಶಸ್ತಿ ವಿಭಾಗಗಳಿದ್ದವು. ಅವುಗಳಲ್ಲಿ ಆರು ಜನಪ್ರಿಯ ವಿಭಾಗಗಳನ್ನು ಜನರ ಮೂಲಕವೇ ವಾಹಿನಿ ಆಯ್ಕೆ ಮಾಡಿದೆ. ಈ ಸಂಬಂಧ ವೀಕ್ಷಕರಿಂದಲೆ ಮತಗಳನ್ನು ಸಂಗ್ರಹಿ ಸಲಾಗಿತ್ತು. ಪೊಲೀಸ್ ಇಲಾಖೆಯ ಆಂತರಿಕಾ ಭದ್ರತಾ ವಿಭಾಗದ ಮುಖ್ಯಸ್ಥ ಭಾಸ್ಕರ್ ರಾವ್ ಹಾಗೂ ಚಲನಚಿತ್ರ ನಟ ರಮೇಶ್ ಅರವಿಂದ ಅವರು ಪ್ರಶಸ್ತಿಗಳನ್ನು ವಿತರಿಸಿದರು.
ಡಾಲಿ ಧನಂಜಯ್, ಅಮೃತಾ ಅಯ್ಯಂಗಾರ್, ಚರಣ್ ರಾಜ್, ಜೈ ಜಗದೀಶ್, ಮೋಹನ್, ನಿಶ್ವಿಕಾ ನಾಯ್ಡು ಸೇರಿದಂತೆ ಚಲನಚಿತ್ರದ ವಿವಿಧ ಕಲಾವಿದರು ಭಾಗವಹಿಸಿ, ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ‘ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್’ ಧಾರಾವಾಹಿಯ ಹೊಸ ಹಾಡನ್ನು ನಟ ಯಶ್ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮವು ಇದೇ ಶನಿವಾರ ಮತ್ತು ಭಾನುವಾರ ಸಂಜೆ 7ಕ್ಕೆ ಪ್ರಸಾರ ಆಗಲಿದೆ ಎಂದು ವಾಹಿನಿಯು ಪ್ರಕಟಣೆಯಲ್ಲಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.