ADVERTISEMENT

ಆಳ–ಅಗಲ | ಹೀಗಿವೆ ರಾಜ್ಯದ ಘಾಟಿ ರಸ್ತೆಗಳು

​ಪ್ರಜಾವಾಣಿ ವಾರ್ತೆ
Published 28 ಮೇ 2025, 0:13 IST
Last Updated 28 ಮೇ 2025, 0:13 IST
   
ಈ ಬಾರಿ ರಾಜ್ಯಕ್ಕೆ ನೈರುತ್ಯ ಮುಂಗಾರು ಅವಧಿಗೂ ಮುನ್ನ ಕಾಲಿಟ್ಟಿದೆ. ಮುಂಗಾರು ಆಗಮನಕ್ಕೂ ಮೊದಲೇ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದೆ. ಕರಾವಳಿ, ಮಲೆನಾಡು ಪ್ರದೇಶ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ವರುಣನ ಅಬ್ಬರ ಮುಂದುವರಿದಿದೆ. ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಇತರ ಭಾಗಗಳನ್ನು ಕರಾವಳಿ, ಮಲೆನಾಡು ಪ್ರದೇಶದೊಂದಿಗೆ ಬೆಸೆಯುವ ಹಲವು ಘಾಟಿ ಪ್ರದೇಶಗಳು ಪಶ್ಚಿಮ ಘಟ್ಟ ಪ್ರದೇಶದಲ್ಲಿವೆ. ಹಾಸನ–ದಕ್ಷಿಣ ಕನ್ನಡ ಜಿಲ್ಲೆಗಳ ನಡುವಿನ ಕೊಂಡಿಯಾಗಿರುವ ಶಿರಾಡಿ ಘಾಟಿ, ಕೊಡಗು–ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಸಂಪಾಜೆ ಘಾಟಿ ಸೇರಿದಂತೆ ಹಲವು ಘಾಟಿಗಳು ಇತ್ತೀಚಿನ ವರ್ಷಗಳಲ್ಲಿ ಪ್ರತಿ ಮಳೆಗಾಲದಲ್ಲೂ ಭೂಕುಸಿತಕ್ಕೆ ತುತ್ತಾಗುತ್ತಿವೆ. ಜೀವ ಹಾನಿ, ಆಸ್ತಿ ಹಾನಿಗೂ ಕಾರಣವಾಗುತ್ತಿವೆ. ನಾಲ್ಕೈದು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕೆಲವು ಘಾಟಿಗಳಲ್ಲಿ ಭೂಕುಸಿತ ಸಂಭವಿಸಿ, ಗಿಡಮರಗಳು ಧರೆಗುರುಳಿ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ. ಮಳೆಗಾಲ ಆರಂಭವಾಗಿರುವ ಈ ಹೊತ್ತಿನಲ್ಲಿ ರಾಜ್ಯದ ಪ್ರಮುಖ ಘಾಟಿಗಳ ಸದ್ಯದ ಸ್ಥಿತಿಗತಿ ಹೇಗಿದೆ ಎಂಬುದನ್ನು ಇಲ್ಲಿ ಕಟ್ಟಿಕೊಡಲಾಗಿದೆ
<div class="paragraphs"><p><strong>&nbsp;ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್. ಪರಮೇಶ್</strong></p></div>

ಸಕಲೇಶಪುರ–ಮಾರನಹಳ್ಳಿ ನಡುವಿನ ದೊಡ್ಡ ತಪ್ಪಲೆ ಬಳಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ವ್ಯವಸ್ಥಿತ ಚರಂಡಿ ಮಾಡದೆ ಇರುವುದರಿಂದ ಮಳೆ ನೀರು ಹೆದ್ದಾರಿ ಮೇಲೆ ಹಳ್ಳದಂತೆ ಹರಿಯುತ್ತಿರುವುದರಿಂದ ರಸ್ತೆ ಗುಂಡಿ ಬಿದ್ದು ಸಂಚಾರಕ್ಕೆ ಸಂಚಕಾರ ಉಂಟಾಗಿದೆ

‘ರಾಡಿ’ಮಯ ಶಿರಾಡಿ ಘಾಟಿ
ರಾಜಧಾನಿ ಬೆಂಗಳೂರು ಮತ್ತು ಬಂದರು ನಗರಿ ಮಂಗಳೂರು ಸೇರಿದಂತೆ ಕರಾವಳಿ ಭಾಗವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ–75ರಲ್ಲಿನ ಶಿರಾಡಿ ಘಾಟಿ ಈ ಬಾರಿಯೂ ಕುಸಿತದ ಭೀತಿ ಎದುರಿಸುತ್ತಿದೆ.   
'ದೇವಿಮನೆ', ಅಪಾಯ ತಪ್ಪಿದ್ದಲ್ಲ
ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣೆಗೆ ಬಂಡೆಗಲ್ಲುಗಳನ್ನು ಸ್ಫೋಟಿಸುವುದರ ಜೊತೆಗೆ, ಅರಣ್ಯ ನಾಶದ ಕಾರಣದಿಂದ ಭೂಕುಸಿತದ ಭೀತಿ ಎದುರಿಸುತ್ತಿರುವ ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಘಾಟಿಗಳು ಅಪಾಯದ ಸ್ಥಿತಿಯಲ್ಲಿವೆ.
'ಸಂಪಾಜೆ': ಭೂ ಕುಸಿತದ ಭೀತಿಗಿಲ್ಲ ಮುಕ್ತಿ
ಕೊಡಗು ಜಿಲ್ಲೆಯಲ್ಲಿ 2018ರ ಮಳೆಗಾಲದಲ್ಲಿ ಭೂಕುಸಿತ ಸಂಭವಿಸಿದ್ದ ವೇಳೆ ಸಂಪಾಜೆ ಘಾಟಿಯಲ್ಲೂ ಭಾರಿ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿತ್ತು. ಆ ಬಳಿಕ, ಪ್ರತಿ ಮಳೆಗಾಲದಲ್ಲೂ ರಸ್ತೆಗೆ ಮಣ್ಣು ಕುಸಿದು ಸಂಚಾರ ಸ್ಥಗಿತಗೊಳ್ಳುತ್ತಿದೆ. ಬಳಸು ಮಾರ್ಗ ಅನಿವಾರ್ಯವಾಗುತ್ತಿದೆ.
'ಚಾರ್ಮಾಡಿ': ಶುರುವಾಗದ ರಸ್ತೆ ವಿಸ್ತರಣೆ ಕಾಮಗಾರಿ
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಬೆಸೆಯುವ ಚಾರ್ಮಾಡಿ ಘಾಟಿಯಲ್ಲಿ ಐದಾರು ವರ್ಷಗಳಿಂದ ಈಚೆಗೆ ಮಳೆಗಾಲದಲ್ಲಿ ಎರಡು ಸಲ ಭೂಕುಸಿತ ಉಂಟಾಗಿದೆ. ಮಳೆಗಾಲ ಶುರುವಾಗುತ್ತಿದ್ದಂತೆಯೇ ಭೂಕುಸಿತದ ಭೀತಿ ಮತ್ತೆ ಕಾಡಲಾರಂಭಿಸಿದೆ. 2019-20ನೇ ಸಾಲಿನಲ್ಲಿ ಸುರಿದ ಭಾರಿ ಮಳೆಯಿಂದ ಈ ಘಾಟಿಯ ಕೆಲ ಭಾಗ ಕುಸಿದು, ಇಲ್ಲಿನ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. 2021–22ರ ಮಳೆಗಾಲದಲ್ಲಿ ಘಾಟಿಯ ಅನೇಕ ಕಡೆ ಮತ್ತೆ ಭೂ ಕುಸಿತ ಉಂಟಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.