ADVERTISEMENT

ವೈರಮುಡಿ ವೈಭವ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2015, 20:36 IST
Last Updated 30 ಮಾರ್ಚ್ 2015, 20:36 IST
ಮಂಡ್ಯ ಜಿಲ್ಲೆಯ ಮೇಲುಕೋಟೆಯ ಬೆಟ್ಟದ ಯೋಗನರಸಿಂಹ ಸ್ವಾಮಿ ದೇವಸ್ಥಾನದ ವಿದ್ಯುತ್‌ ದೀಪ ಅಲಂಕಾರದ ದೃಶ್ಯ ಇದು. ದಕ್ಷಿಣ ಬದರೀಕಾಶ್ರಮ, ಯದುಗಿರಿ ಎಂದೇ ಪ್ರಸಿದ್ಧಿಯಾದ ಮೇಲುಕೋಟೆಯಲ್ಲಿ ಚಲುವನಾರಾಯಣಸ್ವಾಮಿಯ ವಿಶ್ವವಿಖ್ಯಾತ ವೈರಮುಡಿ ಉತ್ಸವದ ಸಂಭ್ರಮಕ್ಕೆ ಸೋಮವಾರ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಭಗವಂತನ ಕಿರೀಟವೆಂದೇ ಕರೆಯಲಾಗುವ ವಜ್ರಖಚಿತ ವೈರಮುಡಿ ಕಿರೀಟವನ್ನು ಧರಿಸಿದ ಚಲುವನಾರಾಯಣಸ್ವಾಮಿ ದರ್ಶನ ಪಡೆದು ಪುನೀತರಾದರು. ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.