ದೇಶದ ಮಕ್ಕಳು ಮತ್ತು ಮಹಿಳೆಯರಲ್ಲಿ ಅಪೌಷ್ಟಿಕತೆ ನೀಗಿಸಲು ಮತ್ತು ಅಗತ್ಯ ಪೋಷಕಾಂಶಗಳನ್ನು ಪೂರೈಸಲು ಕೇಂದ್ರ ಸರ್ಕಾರವು ಹಲವು ಯೋಜನೆಗಳನ್ನು ಹಾಕಿಕೊಂಡಿದೆ.
ಅಂಗನವಾಡಿ ಮೂಲಕ, ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಿಗೆ ಪೋಷಕಾಂಶಯುಕ್ತ ಆಹಾರ ಪೂರೈಕೆ, ಮಾತೃತ್ವ ವಂದನಾ ಯೋಜನೆ ಮೂಲಕ ಆರ್ಥಿಕ ನೆರವು ಮೊದಲಾದ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಆದರೆ ದೇಶದ ಎಲ್ಲಾ ಭಾಗಗಳಲ್ಲಿ ಈ ಯೋಜನೆ ಏಕಪ್ರಕಾರದಲ್ಲಿ ಅನುಷ್ಠಾನಕ್ಕೆ ಬರುತ್ತಿಲ್ಲ. ಕೆಲವು ರಾಜ್ಯಗಳಲ್ಲಿ ಈ ಯೋಜನೆಗಳ ಫಲಾನುಭವಿಗಳ ಪ್ರಮಾಣ ಗರಿಷ್ಠಮಟ್ಟದಲ್ಲಿ ಇದೆ. ಕೆಲವು ರಾಜ್ಯಗಳಲ್ಲಿ ಕಡಿಮೆ ಮಟ್ಟದಲ್ಲಿ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.